September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ. ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ.

ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ ಕೇವಲ 125ರಿಂದ 150ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ ಎಂಬುದು ಎಲ್ಲ ಸಮೀಕ್ಷೆಗಳ ಬಹುತೇಕ ಸಾರಾಂಶವಾಗಿದೆ. ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ.ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 362- 392 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ 141-161 ಸ್ಥಾನ ಗಳಿಸಲಿದೆ. ಇತರರು 10-20 ಸ್ಥಾನ ಗಳಿಸಲಿದ್ದಾರೆ.

ರಿಪಬ್ಲಿಕ್ ಭಾರತ್-ಮ್ಯಾಟ್ರಿಝ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 353-368 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 118-133 ಸ್ಥಾನಕ್ಕಷ್ಟೆ ಸೀಮಿತವಾಗಲಿದೆ. ಇತರರು 43- 48 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದಾರೆ.ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 359 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ ಕೇವಲ 154 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಇತರರು 30 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.ಈ ನಾಲ್ಕು ಸಮೀಕ್ಷೆಗಳ ಸರಾಸರಿ ಆಧಾರದಲ್ಲಿ ಎನ್‌ಡಿಎ 350ಕ್ಕಿಂತ ಹೆಚ್ಚು ಹಾಗೂ ಇಂಡಿಯಾ ಮೈತ್ರಿಕೂಟ 125-150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ‘ಪೋಲ್ ಆಫ್ 4 ಎಕ್ಸಿಟ್ ಪೋಲ್ಸ್ ಅಂದಾಜಿಸಿದೆ. ಉಳಿದ ಸಮೀಕ್ಷೆಗಳೂ ಇದರಿಂದ ಭಿನ್ನವಾಗಿಲ್ಲ

Related posts

ಬೆಳ್ತಂಗಡಿ ಲೋಬೊ ಮೋಟಾರ್‍ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್: ಗ್ರಾಹಕರಿಗೆ ರೂ.10 ಸಾವಿರ ತನಕ ಉಳಿತಾಯ ಮಾಡುವ ಸುವರ್ಣ ಅವಕಾಶ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಗ್‌ಬಾಸ್ ಕನ್ನಡ ಸೀಸನ್ 11 ರ ಟ್ರೋಫಿ ಮುಡಿಗೇರಿಸಿಕೊಂಡ ಹಾವೇರಿಯ ಹಳ್ಳಿ ಹೈದ ಹನುಮಂತು

Suddi Udaya

ಸುನ್ನೀ ವಿದ್ಯಾಬ್ಯಾಸ ಬೋರ್ಡ್ ಫಲಿತಾಂಶ: ಕೊಯ್ಯೂರು ಉಣ್ಣಾಲು ಮದರಸದ ಮುಹಮ್ಮದ್ ರಾಝಿ, ಫಾತಿಮತ್ ನುಝೈರಾ ರೇಂಜ್ ಗೆ ಪ್ರಥಮ

Suddi Udaya

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya
error: Content is protected !!