25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ. ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ.

ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ ಕೇವಲ 125ರಿಂದ 150ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ ಎಂಬುದು ಎಲ್ಲ ಸಮೀಕ್ಷೆಗಳ ಬಹುತೇಕ ಸಾರಾಂಶವಾಗಿದೆ. ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ.ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 362- 392 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ 141-161 ಸ್ಥಾನ ಗಳಿಸಲಿದೆ. ಇತರರು 10-20 ಸ್ಥಾನ ಗಳಿಸಲಿದ್ದಾರೆ.

ರಿಪಬ್ಲಿಕ್ ಭಾರತ್-ಮ್ಯಾಟ್ರಿಝ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 353-368 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 118-133 ಸ್ಥಾನಕ್ಕಷ್ಟೆ ಸೀಮಿತವಾಗಲಿದೆ. ಇತರರು 43- 48 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದಾರೆ.ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 359 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ ಕೇವಲ 154 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಇತರರು 30 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.ಈ ನಾಲ್ಕು ಸಮೀಕ್ಷೆಗಳ ಸರಾಸರಿ ಆಧಾರದಲ್ಲಿ ಎನ್‌ಡಿಎ 350ಕ್ಕಿಂತ ಹೆಚ್ಚು ಹಾಗೂ ಇಂಡಿಯಾ ಮೈತ್ರಿಕೂಟ 125-150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ‘ಪೋಲ್ ಆಫ್ 4 ಎಕ್ಸಿಟ್ ಪೋಲ್ಸ್ ಅಂದಾಜಿಸಿದೆ. ಉಳಿದ ಸಮೀಕ್ಷೆಗಳೂ ಇದರಿಂದ ಭಿನ್ನವಾಗಿಲ್ಲ

Related posts

ಮ್ಯಾಂಗೋ ಜ್ಯೂಸ್‌ನಲ್ಲಿ ಇಲಿ ಪಾಷಾಣ ಸೇವಿಸಿದ್ದ ಯುವಕ ಮೊಹಮ್ಮದ್ ಫೈಝಲ್‌ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಕಲ್ಮಂಜ : ಸಿದ್ದಬೈಲು ಪರಾರಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ ಮತ್ತು ಅಧಿಕಾರಿಗಳಿಗೆ ಬೆದರಿಕೆ ವಿರುದ್ಧ ಬೆಳ್ತಂಗಡಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ

Suddi Udaya
error: Content is protected !!