25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

ಕೊಕ್ಕಡ: ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ-ಕೊಕ್ಕಡ 2024-25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಹಾಗೂ ನೂತನವಾಗಿ ಬಂದಿರುವ ಶಾಲಾ ಸಂಚಾಲಕ ವಂ. ಫಾ. ಅನಿಲ್ ಪ್ರಕಾಶ್ ಡಿಸಿಲ್ವಾ ಇವರನ್ನು ಬ್ಯಾಂಡ್ ಸೆಟ್‌ನ ಮೂಲಕ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.

ಗಣ್ಯರಿಂದ ದೀಪ ಬೆಳಗಿಸಿ ಜೊತೆಗೆ ಹೊಸ ಮಕ್ಕಳಿಗೆ ಹೂ ನೀಡಿ, ಪುಸ್ತಕ ವಿತರಿಸುವ ಮೂಲಕ ಸಮಾರಂಭದ ಉದ್ಘಾಟನೆಯನ್ನು ಮಾಡಲಾಯಿತು

ಶಾಲಾ ಸಂಚಾಲಕ ಫಾ. ಅನಿಲ್ ಪ್ರಕಾಶ್ ಡಿಸಿಲ್ವಾ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಜೆಸಿಐ ಇಂಡಿಯ ವಲಯ ತರಬೇತುದಾರರು ಜೀವನದ ಎಲ್ಲಾ ಹಂತಗಳಲ್ಲಿ ವಿದ್ಯಾರ್ಥಿ ಜೀವನ ಶ್ರೇಷ್ಠ ಎಂದು ಉತ್ತಮ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಹೇಮಾವತಿ ದಾಮೋದರ್ ಭಟ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಹೆರಾಲ್ಡ್ ಪ್ರಕಾಶ್ ಗಲ್ಭಾವೊ, ಚರ್ಚ್‌ನ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೇರೊ, ಹೆತ್ತವರು-ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜೆನೆವಿವ್ ಫೆನಾಂಡಿಸ್ ಪ್ರಾಸ್ತಾವಿಕ ಮಾತುಗಳ ಮೂಲಕ ಶಾಲಾ ನಿಯಮಗಳನ್ನು ತಿಳಿಸಿದರು. ನೂತನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು ಎಂ. ಉಮೇಶ ರವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಶಿಕ್ಷಕಿ ಶ್ರೀಮತಿ ಅಂಬಿಕಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅನಿಶಾ ಧನ್ಯವಾದವಿತ್ತರು, ಶಿಕ್ಷಕಿ ಶ್ರೀಮತಿ ಚೈತ್ರ ಕಾರ್ಯಕ್ರಮದ ನಿರೂಪಿಸಿದರು.

Related posts

ಮಾ.10: ಶಿರ್ಲಾಲು ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಕೊಕ್ಕಡ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದಲ್ಲಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರ ಹುಟ್ಟುಹಬ್ಬದ ಆಚರಣೆ: ಧನಸಹಾಯ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಮಹಿಳಾ ವೇದಿಕೆಯ ಸದಸ್ಯರಿಂದ ವಿವಿಧ ಕ್ಷೇತ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ವಿವಿಧ ಡೊಳ್ಳು ಕುಣಿತ, ಕುಣಿತಾ ಭಜನೆ ಹಾಗೂ ಸಾವಿರಾರು ಭಕ್ತರ ಕೂಡುವಿಕೆಯೊಂದಿಗೆ ವೈಭವದ ಹಸಿರುವಾಣಿ ಮೆರವಣಿಗೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
error: Content is protected !!