July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

ಕೊಕ್ಕಡ: ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ-ಕೊಕ್ಕಡ 2024-25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಹಾಗೂ ನೂತನವಾಗಿ ಬಂದಿರುವ ಶಾಲಾ ಸಂಚಾಲಕ ವಂ. ಫಾ. ಅನಿಲ್ ಪ್ರಕಾಶ್ ಡಿಸಿಲ್ವಾ ಇವರನ್ನು ಬ್ಯಾಂಡ್ ಸೆಟ್‌ನ ಮೂಲಕ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.

ಗಣ್ಯರಿಂದ ದೀಪ ಬೆಳಗಿಸಿ ಜೊತೆಗೆ ಹೊಸ ಮಕ್ಕಳಿಗೆ ಹೂ ನೀಡಿ, ಪುಸ್ತಕ ವಿತರಿಸುವ ಮೂಲಕ ಸಮಾರಂಭದ ಉದ್ಘಾಟನೆಯನ್ನು ಮಾಡಲಾಯಿತು

ಶಾಲಾ ಸಂಚಾಲಕ ಫಾ. ಅನಿಲ್ ಪ್ರಕಾಶ್ ಡಿಸಿಲ್ವಾ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಜೆಸಿಐ ಇಂಡಿಯ ವಲಯ ತರಬೇತುದಾರರು ಜೀವನದ ಎಲ್ಲಾ ಹಂತಗಳಲ್ಲಿ ವಿದ್ಯಾರ್ಥಿ ಜೀವನ ಶ್ರೇಷ್ಠ ಎಂದು ಉತ್ತಮ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಹೇಮಾವತಿ ದಾಮೋದರ್ ಭಟ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಹೆರಾಲ್ಡ್ ಪ್ರಕಾಶ್ ಗಲ್ಭಾವೊ, ಚರ್ಚ್‌ನ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೇರೊ, ಹೆತ್ತವರು-ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜೆನೆವಿವ್ ಫೆನಾಂಡಿಸ್ ಪ್ರಾಸ್ತಾವಿಕ ಮಾತುಗಳ ಮೂಲಕ ಶಾಲಾ ನಿಯಮಗಳನ್ನು ತಿಳಿಸಿದರು. ನೂತನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು ಎಂ. ಉಮೇಶ ರವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಶಿಕ್ಷಕಿ ಶ್ರೀಮತಿ ಅಂಬಿಕಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅನಿಶಾ ಧನ್ಯವಾದವಿತ್ತರು, ಶಿಕ್ಷಕಿ ಶ್ರೀಮತಿ ಚೈತ್ರ ಕಾರ್ಯಕ್ರಮದ ನಿರೂಪಿಸಿದರು.

Related posts

ಭಾರೀ ಗಾಳಿ ಮಳೆ: ರೆಖ್ಯದಲ್ಲಿ ಮನೆಯ ಮೇಲ್ಚಾವಣಿ ಮತ್ತು ಗೋಡೆ ಕುಸಿತ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!