23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

ಕೊಕ್ಕಡ: ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ-ಕೊಕ್ಕಡ 2024-25ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಹಾಗೂ ನೂತನವಾಗಿ ಬಂದಿರುವ ಶಾಲಾ ಸಂಚಾಲಕ ವಂ. ಫಾ. ಅನಿಲ್ ಪ್ರಕಾಶ್ ಡಿಸಿಲ್ವಾ ಇವರನ್ನು ಬ್ಯಾಂಡ್ ಸೆಟ್‌ನ ಮೂಲಕ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು.

ಗಣ್ಯರಿಂದ ದೀಪ ಬೆಳಗಿಸಿ ಜೊತೆಗೆ ಹೊಸ ಮಕ್ಕಳಿಗೆ ಹೂ ನೀಡಿ, ಪುಸ್ತಕ ವಿತರಿಸುವ ಮೂಲಕ ಸಮಾರಂಭದ ಉದ್ಘಾಟನೆಯನ್ನು ಮಾಡಲಾಯಿತು

ಶಾಲಾ ಸಂಚಾಲಕ ಫಾ. ಅನಿಲ್ ಪ್ರಕಾಶ್ ಡಿಸಿಲ್ವಾ ಅಧ್ಯಕ್ಷತೆಯನ್ನು ವಹಿಸಿ ಶುಭ ಹಾರೈಸಿದರು. ಜೆಸಿಐ ಇಂಡಿಯ ವಲಯ ತರಬೇತುದಾರರು ಜೀವನದ ಎಲ್ಲಾ ಹಂತಗಳಲ್ಲಿ ವಿದ್ಯಾರ್ಥಿ ಜೀವನ ಶ್ರೇಷ್ಠ ಎಂದು ಉತ್ತಮ ಮಾತುಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ಹೇಮಾವತಿ ದಾಮೋದರ್ ಭಟ್, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಹೆರಾಲ್ಡ್ ಪ್ರಕಾಶ್ ಗಲ್ಭಾವೊ, ಚರ್ಚ್‌ನ ಪಾಲನ ಮಂಡಳಿಯ ಉಪಾಧ್ಯಕ್ಷ ಪ್ರವೀಣ್ ನೋಯೆಲ್ ಮೊಂತೇರೊ, ಹೆತ್ತವರು-ಪೋಷಕರು, ಹಳೆ ವಿದ್ಯಾರ್ಥಿಗಳು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜೆನೆವಿವ್ ಫೆನಾಂಡಿಸ್ ಪ್ರಾಸ್ತಾವಿಕ ಮಾತುಗಳ ಮೂಲಕ ಶಾಲಾ ನಿಯಮಗಳನ್ನು ತಿಳಿಸಿದರು. ನೂತನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು ಎಂ. ಉಮೇಶ ರವರು ಉಪಾಧ್ಯಕ್ಷರಾಗಿ ಆಯ್ಕೆಯಾದರು.

ಶಿಕ್ಷಕಿ ಶ್ರೀಮತಿ ಅಂಬಿಕಾ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಅನಿಶಾ ಧನ್ಯವಾದವಿತ್ತರು, ಶಿಕ್ಷಕಿ ಶ್ರೀಮತಿ ಚೈತ್ರ ಕಾರ್ಯಕ್ರಮದ ನಿರೂಪಿಸಿದರು.

Related posts

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ಮೊಗ್ರು: ಯುವ ಕೃಷಿಕ ದೇವಿಪ್ರಸಾದ್ ಗೌಡ ಕಡಮ್ಮಾಜೆ ರವರಿಗೆ “ಉತ್ತಮ ಅಡಿಕೆ ಕೃಷಿಕ ಪ್ರಶಸ್ತಿ”

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಆ.22: ಬೆಳ್ತಂಗಡಿಯಲ್ಲಿ ಹೋಟೆಲ್ ಶ್ರೀದೇವಿ ಶುಭಾರಂಭ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಗೋವಿಂದೂರು ಗುಡ್ಡಕ್ಕೆ ಬಿದ್ದ ಬೆಂಕಿ : ಗ್ರಾ.ಪಂ ಸದಸ್ಯ ಲತೀಫ್‌ರ ಸಮಯ ಪ್ರಜ್ಞೆ

Suddi Udaya
error: Content is protected !!