September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು ಎಂದು ಧರ್ಮಸ್ಥಳ ಪ್ರಾಥಮಿಕವಾಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ, ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ, ಧನಲಕ್ಷ್ಮಿ ಜನಾರ್ಧನ್,ಪ್ರಭಾಕರ ಗೌಡ ಬೊಳ್ಮ,ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ,ತಂಗಚ್ಚನ್ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು ಪದ್ಮಾವತಿ ದಂಪತಿಯನ್ನು ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ತಾಯಿ ದೇವಕಿ, ಸಂಘದ ಸದಸ್ಯರು ಹಾಜರಿದ್ದರು.

Related posts

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೆ

Suddi Udaya

ಉಜಿರೆ: ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಕೆ.ಎಸ್ ಆರ್ ಟಿಸಿ ಬಸ್ ಟಯರ್

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!