25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸುದೀರ್ಘ 40 ವರ್ಷಗಳ ಸೇವೆ ಸಲ್ಲಿಸಿ ಮೇ 31ರಂದು ನಿವೃತ್ತರಾಗಿದ್ದಾರೆ.

ಧರ್ಮಸ್ಥಳದ ಮೋಹನ್ ರಾವ್ ಪಡ್ಡೆಟ್ನಾಯ – ಸುಮತಿ ಪಡ್ಡೆಟ್ನಾಯ ದಂಪತಿಯ ಮೂರನೇ ಪುತ್ರರಾಗಿ ಜನಿಸಿದ ಸುಬ್ರಹ್ಮಣ್ಯ ರಾವ್, ಉಜಿರೆಯಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣ, ಮಡಿಕೇರಿಯ ಶ್ರೀ ಸರಸ್ವತಿ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಶಿಕ್ಷಕ ತರಬೇತಿ ಪೂರೈಸಿದ್ದರು.

ಇವರ ತಂದೆ ಉಜಿರೆಯ ಧ.ಮಂ.ಅ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿದ್ದು, ಅವರ ಅಕಾಲಿಕ ನಿಧನದ ಬಳಿಕ 1984ರಲ್ಲಿ ಅದೇ ಶಾಲೆಯಲ್ಲಿ ಗೌರವ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಧರ್ಮಸ್ಥಳ ಧ.ಮಂ. ಅ.ಹಿ.ಪ್ರಾ. ಶಾಲೆ ಮತ್ತು ಪುದುವೆಟ್ಟು ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ 23 ವರ್ಷಗಳಿಂದ ಸಹಶಿಕ್ಷಕರಾಗಿ, 6 ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.

ಇವರು ಯೋಗ ಶಿಕ್ಷಕರಾಗಿ, ತಾಲೂಕು ಯೋಗ ಸಂಘಟಕ, ನೃತ್ಯ ಗುರು, ನಾಟಕ ತರಬೇತುದಾರರಾಗಿಯೂ ಹೆಸರು ಮಾಡಿದ್ದಾರೆ. ಪ್ರತಿಭಾ ಕಾರಂಜಿಯ ಕೋಲಾಟ ಸ್ಪರ್ಧೆಗೆ ಮಕ್ಕಳನ್ನು ಅಣಿಗೊಳಿಸಿ, ತಂಡವನ್ನು 6 ಬಾರಿ ಜಿಲ್ಲಾ ಮಟ್ಟಕ್ಕೆ ಹಾಗೂ 5 ಬಾರಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗೆ ಆಯ್ಕೆಗೊಳಿಸುವಲ್ಲಿ ಶ್ರಮಿಸಿದ್ದರು. ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಕಾರ್ಯದರ್ಶಿಯಾಗಿದ್ದು, ಇದೀಗ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಡಿ.14: ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

Suddi Udaya
error: Content is protected !!