ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ಇವರನ್ನು ಆಡಳಿತ ಮಂಡಳಿಯ ವತಿಯಿಂದ ನೇಮಕ ಮಾಡಲಾಯಿತು.


ಶ್ರೀ ಧ. ಮo. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರಾದ ಸತೀಶ್ ಚಂದ್ರ ಇವರು ನೂತನ ಮುಖ್ಯ ಶಿಕ್ಷಕರಿಗೆ ಅಧಿಕಾರ ಹಸ್ತಾಂರಿಸಿ ಶುಭ ಕೋರಿದರು. ಹಾಗೂ ಈವರೆಗೆ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಪಿ. ಸುಬ್ರಹ್ಮಣ್ಯ ರಾವ್ ಇವರ ನಿವೃತ್ತಿ ಜೀವನಕ್ಕೆ ಶುಭಕೋರಿದರು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Comment

error: Content is protected !!