ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2024 – 25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಶಾಲೆಯ ಆಡಳಿತ ಮಂಡಳಿಯವರು ಎಲ್ಲಾ ತರಗತಿಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ ಬರೆಯುವ ಪುಸ್ತಕಗಳ ವಿತರಣಾ ಸಮಾರಂಭ ಜರಗಿತು.

ಸಮಾರಂಭದ ಉದ್ಘಾಟಕರಾಗಿ ಆಗಮಿಸಿದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಆಡಳಿತ ಸಮಿತಿಯ ಕಾರ್ಯದರ್ಶಿಗಳಾದ ದುರ್ಗಾಪ್ರಸಾದ್ ಕೆರ್ಮುಣ್ಣಾಯರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಶಾಲೆಯೆಂದರೆ ಕೇವಲ ಪಾಠ, ಪರೀಕ್ಷೆ, ಫಲಿತಾಂಶ ನೀಡುವ ಕೇಂದ್ರವಲ್ಲ. ಅಲ್ಲಿ ನಡೆಸುವ ಇತರ ಚಟುವಟಿಕೆಗಳೂ ಅಷ್ಟೇ ಮುಖ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳೂ ಒಂದೊಂದು ವಿಭಾಗದಲ್ಲಿ ಪ್ರವೀಣರಿರುತ್ತಾರೆ. ಎಲ್ಲವೂ ಸೇರಿ ಸತ್ವಯುತ ಕಲಿಕೆಯಾಗುತ್ತದೆ. ಆ ಮೂಲಕ ಪರಸ್ಪರ ವಿಶ್ವಾಸವನ್ನು ಬೆಳೆಸಿಕೊಂಡು ಯಶಸ್ವೀ ವಿದ್ಯಾರ್ಥಿಗಳಾಗಬೇಕು ಎಂದು ಹಾರೈಸಿದರು.

ಅತಿಥಿಗಳಾಗಿ ಆಗಮಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಹಾರೃಸಿದರು. ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು, ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ವಂದಿಸಿ, ಶಿಕ್ಷಕ ಸುಮನ್ ಯು ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಬೆಳ್ತಂಗಡಿ: ಮಾಳವ ಯಾನೆ ಮಲ್ಲವರ ಸಂಘದ ಕ್ರೀಡಾಕೂಟ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ–ನೈರ್ಮಲ್ಯ ಕುರಿತು ತಜ್ಞರಿಂದ ಮಾಹಿತಿ ಕಾರ್ಯಾಗಾರ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!