25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರನ್ನು ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭವು ಮೇ 31ರಂದು ಬೆಳ್ತಂಗಡಿಯ ಅಂಬೇಡ್ಕ‌ರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್‌ ರಾಜ್ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್‌ಗಳಾದ ಸುಜಿತ್ ಹಾಗೂ ಹರ್ಷಿತ್, ಇಂಜಿನಿಯರ್ ಹರೀಶ್ ಕಾರಿಂಜ, ಬೆಳ್ತಂಗಡಿ ತಾಲೂಕು ಸಿವಿಲ್‌ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಗಿರಿರಾಜ ಬಾರಿತ್ತಾಯ, ಕಾರ್ಯದರ್ಶಿ ಕೃಷ್ಣ ಕುಮಾ‌ರ್, ಇಲಾಖೆಯ ಸಿಬ್ಬಂದಿಗಳು, ಸಿವಿಲ್‌ ಗುತ್ತಿಗೆದಾರರ ಸಂಘದ ಸದಸ್ಯರು ಹಾಗೂ ನಿವೃತ್ತರ ಸ್ನೇಹಿತರು ಭಾಗವಹಿಸಿದ್ದರು.

ಸರಕಾರಿ ಸೇವೆಯಿಂದ ನಿವೃತ್ತರಾದ ಎಂ.ಆರ್. ಪ್ರಸನ್ನ ಹಾಗೂ ಅವರ ಧರ್ಮಪತ್ನಿ ಜಲಜಾರನ್ನು ಸಮ್ಮಾನಿಸಿ ಗೌರವಿಸಲಾಯಿತು. ಎಂ.ಆ‌ರ್. ಪ್ರಸನ್ನ ಮಾತನಾಡಿ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರಲ್ಲದೇ; ತನಗೆ ನೀಡಿದ ಆತ್ಮೀಯ ಸಮ್ಮಾನಕ್ಕೆ ಅಭಿವಂದನೆ ಸಲ್ಲಿಸಿದರು.

Related posts

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಬಡವರ ಅಭಿವೃದ್ಧಿಗಾಗಿ ರೂಪಿಸಿದ ಗ್ರಾಮಾಭಿವೃದ್ಧಿ ಯೋಜನೆಯ ವ್ಯವಸ್ಥೆಯನ್ನು ಹಾಳು ಮಾಡುವ ಹುನ್ನಾರ: ಸೂಕ್ತ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಎಸ್.ಡಿ.ಎಂ ಕಾಲೇಜಿನ ಮಾಲಿನಿ ಅಂಚನ್ ಅವರಿಗೆ ಪಿ.ಎಚ್.ಡಿ ಪದವಿ

Suddi Udaya

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಧರ್ಮಸ್ಥಳ: ಶಾಂತಿವನದಲ್ಲಿ 79ನೇ ಸ್ವಾತಂತ್ರ‍್ಯೋತ್ಸವದ ಭಾವೈಕ್ಯ ಉತ್ಸವ

Suddi Udaya
error: Content is protected !!