July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಸಂಜೀವ ನಾಯ್ಕರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ರಾಜ್ ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವಯೋ ನಿವೃತ್ತರಾದ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕರ ಬೀಳ್ಕೊಡುಗೆ ಸಮಾರಂಭವು ಮೇ 31ರ ಅಪರಾಹ್ನ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವೈಜಣ್ಣ ಮಾತನಾಡಿ; ಸಂಜೀವ ನಾಯ್ಕರ ನಿವೃತ್ತ ಜೀವನ ನೆಮ್ಮದಿಯಿಂದ ಕೂಡಿರಲಿ ಎಂದು ಹಾರೈಸಿದರು.

ತಾಲೂಕಿನ ವಿವಿಧ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಸಿಬ್ಬಂದಿವರ್ಗದವರು ಹಾಗೂ ತಾಲೂಕು ಪಂಚಾಯತ್‌ನ ಸಿಬ್ಬಂದಿಗಳು ಈ ಸರಳ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ತಾಲೂಕು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಂಘದ ಅಧ್ಯಕ್ಷ ನಾರಾವಿ ಗ್ರಾಮ ಪಂಚಾಯತ್‌ನ ಸುಧಾಕ‌ರ್ ಮಾತನಾಡಿ ಸಂಜೀವ ನಾಯ್ಕರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.

ಬೆಳ್ತಂಗಡಿ ತಾಲೂಕು ಪಂಚಾಯತ್ ಕಛೇರಿಯ ವ್ಯವಸ್ಥಾಪಕ ಪ್ರಶಾಂತ್‌ ಹಾಗೂ ಉಜಿರೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ ನೊಚ್ಚ ಮಾತನಾಡಿ ಸಂಜೀವ ನಾಯ್ಕರೊಂದಿಗಿನ ವೃತ್ತಿ ಜೀವನದ ಒಡನಾಟವನ್ನು ಮೆಲುಕು ಹಾಕಿದರಲ್ಲದೇ; ನಿವೃತ್ತ ಜೀವನಕ್ಕೆ ಶುಭಕಾಮನೆಗಳನ್ನು ಸಲ್ಲಿಸಿದರು. ಮಹಿಳಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪರವಾಗಿ ನಿವೃತ್ತ ಸಂಜೀವ ನಾಯ್ಕರಿಗೆ ನೆರಿಯ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಸುಮಾ ಶುಭ ಹಾರೈಸಿದರು. ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಹಾಯಕ ನಿರ್ದೇಶಕಿ ಸಫಾನ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಮಾದರಿ ತಯಾರಿ ಸ್ಪರ್ಧೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರತೀಕ್ ವಿ. ಶೆಟ್ಟಿ ಪ್ರಥಮ ಸ್ಥಾನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!