25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

ಉಜಿರೆ: ವೈಜ್ಞಾನಿಕವಾಗಿ ಮುಂದುವರಿಯುತ್ತಿರುವ ಈ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಮಟ್ಟದಲ್ಲಿ ತೊಡಗಿಸಿಕೊಳ್ಳುವುದು ಅನಿವಾರ್ಯವಾಗಿದೆ. ಪ್ರಥಮ ವರ್ಷದಿಂದಲೇ ಪದವಿ ಪೂರ್ವ ಹಂತದ ಕಲಿಕೆಯಲ್ಲಿ ದಕ್ಷತೆಯನ್ನು ಕಾಯ್ದುಕೊಂಡರೆ ಮುಂದಿನ ದಿನಗಳಲ್ಲಿ ಕಾರ್ಯ ಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬಹುದು.


ಅಂಕಗಳನ್ನು ತುಂಬಿ ತುಂಬಿ ಕಳಿಸುವ ಕ್ರಮ ಹೊಂದಿರುವ ಈಗಿನ ಶಿಕ್ಷಣ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಡಿಮೆ ಅಂಕ ಬಂದು ತಕ್ಷಣ ಮಾನಸಿಕವಾಗಿ ಕುಗ್ಗುವಂತಹ ಸ್ಥಿತಿಗತಿಗಳು ಹೆಚ್ಚಿಗೆದ್ದು ಇವುಗಳನ್ನು ಸರಿಯಾದ ರೀತಿಯಲ್ಲಿ ನಿಭಾಯಿಸುವ ,ನಿರ್ವಹಿಸುವ ಗುಣಗಳನ್ನು ವಿದ್ಯಾರ್ಥಿಗಳು ಕಲಿತುಕೊಳ್ಳಬೇಕು. ಮಕ್ಕಳನ್ನು ದಂಡಿಸೋ ಬದಲು ಉದಾಹರಣೆಗಳ ಮೂಲಕ ಹೇಳುವುದರೊಂದಿಗೆ ಮಕ್ಕಳ ಮಾನಸಿಕ ಆರೋಗ್ಯ ಉತ್ತಮಿಕೆ ಸಾಧಿಸುವುದು ಹಾಗಾಗಿ ದಂಡನೆಗೆ ಅವಕಾಶ ಕೊಡದೆ ವಿದ್ಯಾರ್ಥಿ ಮುಂದುವರಿಯಬೇಕು. ಮೊಬೈಲ್, ಟಿವಿಗಳಿಗೆ ಜೋತು ಬಿದ್ದಿದ್ದ ವಿದ್ಯಾರ್ಥಿಗಳು ಇನ್ನು ಮುಂದೆ ಪುಸ್ತಕದ ಗೆಳೆತನವನ್ನು ಬೆಳೆಸಿ ,ಜೊತೆಗೆ ಗ್ರಂಥಾಲಯದ ಸರಿಯಾದ ಬಳಕೆ ,ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡರೆ ಕಲಿಕೆಗೆ ಪೂರಕವಾಗುವುದು. ಇನ್ನೂ ಚಿಕ್ಕ ಮಕ್ಕಳೆಂಬ ಭ್ರಮೆಯಿಂದ ಹೊರಬಂದು ಜವಾಬ್ದಾರಿಗಳನ್ನು ಹೊತ್ತುಕೊಂಡು ಹೆತ್ತವರ ಜೊತೆ ಆಧ್ಯಾಪಕರ ಜೊತೆ ಸರಿಯಾದ ರೀತಿಯಲ್ಲಿ ಆಪ್ತವಾಗಿ, ಮುಕ್ತವಾಗಿ ಬೆರೆಯುವ ಮನಸ್ಥಿತಿ ಉಳ್ಳವರಾಗಿ ಸಮಸ್ಯೆಯನ್ನ ಬೆಳೆಯಲು ಬಿಟ್ಟು ನಂತರ ಪಶ್ಚತಾಪ ಪಡುವ ಬದಲು ಪ್ರಾರಂಭದಲ್ಲೇ ಸಮಸ್ಯೆಗಳ ಮೂಲ ಹುಡುಕಿ ಪರಿಹಾರವನ್ನು ಕಂಡುಕೊಳ್ಳುವ ಪ್ರಯತ್ನವನ್ನು ಮಾಡಬೇಕು. ‘ದುಬಾರಿ ವಸ್ತುಗಳು ಮನುಷ್ಯನನ್ನು ಸೆಳೆಯಬಲ್ಲದು ಆದರೆ ಅದು ಶಾಶ್ವತವಲ್ಲ, ಅದರೆ ಜೀವನದ ಮೌಲ್ಯಗಳು ಮಾತ್ರ ಶಾಶ್ವತವಾಗಿ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಏರಿಸಬಲ್ಲದು. ಹಾಗಾಗಿ ಶಿಕ್ಷಣದ ಜೊತೆಗೆ ಸಂಸ್ಕಾರವೂ ಇರಲಿ, ಎಂದು ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಇವರು ವಿದ್ಯಾರ್ಥಿಗಳನ್ನು ಹಾಗೂ ಹೆತ್ತವರನ್ನು ಕುರಿತು ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ಎರಡು ವರ್ಷಗಳ ಕಾಲ ನಿರ್ವಹಿಸುವ ಶೈಕ್ಷಣಿಕ ಜವಾಬ್ದಾರಿಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಸಮರ್ಪಕ ಮಾಹಿತಿಯನ್ನು ನೀಡಿದರು.

ಗಣಕ ಶಾಸ್ತ್ರದ ಉಪನ್ಯಾಸಕ ಪವಿತ್ರ ಕುಮಾರ್ ಕಾಲೇಜಿನ ಸಿಬ್ಬಂದಿ ವರ್ಗ ಹಾಗೂ ನೀತಿ ನಿಯಮಗಳ ಪರಿಚಯ ಮಾಡಿಕೊಟ್ಟರು. ಗಣಿತಶಾಸ್ತ್ರ ಉಪನ್ಯಾಸಕಿಯಾದ ಶ್ರೀಮತಿ ಧನಲಕ್ಷ್ಮಿ ಇವರು ಶೈಕ್ಷಣಿಕ ಚಟುವಟಿಕೆ ಕುರಿತು ಮಾಹಿತಿ ನೀಡಿದರು. ಭೌತಶಾಸ್ತ್ರ ಉಪನ್ಯಾಸಕ ವಿಕ್ರಂ.ಪಿ ಕಾಲೇಜಿನಲ್ಲಿ ನೀಡಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಾದ ಸಿಇಟಿ/ನೀಟ್, ಜೆಇಇ ಕುರಿತು ಮಾಹಿತಿ ನೀಡಿದರು.

ದೈಹಿಕ ಮಾರ್ಗದರ್ಶಕ ಲಕ್ಷ್ಮಣ್ ಜಿ.ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಉಪಪ್ರಾಂಶುಪಾಲರಾದ ಮನೀಶ್ ಕುಮಾರ್ ಸ್ವಾಗತಿಸಿದರು. ಇಂಗ್ಲೀಷ್ ವಿಭಾಗದ ಉಪನ್ಯಾಸಕರಾದ ಪಾರ್ಶ್ವನಾಥ ಹೆಗಡೆ ನಿರೂಪಿಸಿ, ವಂದಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya
error: Content is protected !!