22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ. ಎನ್‌ಡಿಎ ಮೈತ್ರಿಕೂಟ 350ಕ್ಕಿಮತ ಹೆಚ್ಚು ಸ್ಥಾನಗಳನ್ನು ಗಳಿಸಲಿದೆ ಎಂದು 4 ಎಕ್ಸಿಟ್ ಪೋಲ್ ಗಳು ಭವಿಷ್ಯ ನುಡಿದಿದೆ.

ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ ಕೇವಲ 125ರಿಂದ 150ಸ್ಥಾನಗಳನ್ನು ಮಾತ್ರ ಗೆಲ್ಲಲಿದೆ ಎಂಬುದು ಎಲ್ಲ ಸಮೀಕ್ಷೆಗಳ ಬಹುತೇಕ ಸಾರಾಂಶವಾಗಿದೆ. ಇಂಡಿಯಾ ನ್ಯೂಸ್‌-ಡಿ ಡೈನಾಮಿಕ್ಸ್ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 371 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 125 ಸ್ಥಾನಗಳಿಗಷ್ಟೆ ತೃಪ್ತಿ ಪಟ್ಟುಕೊಳ್ಳಲಿದೆ. ಇತರರು 47 ಸ್ಥಾನಗಳಲ್ಲಿ ಗೆಲುವು ಸಾಧಿಸಲಿವೆ.ಜನ್ ಕಿ ಬಾತ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ ಮೈತ್ರಿಕೂಟ 362- 392 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ 141-161 ಸ್ಥಾನ ಗಳಿಸಲಿದೆ. ಇತರರು 10-20 ಸ್ಥಾನ ಗಳಿಸಲಿದ್ದಾರೆ.

ರಿಪಬ್ಲಿಕ್ ಭಾರತ್-ಮ್ಯಾಟ್ರಿಝ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 353-368 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದರೆ, ಇಂಡಿಯಾ ಮೈತ್ರಿಕೂಟ 118-133 ಸ್ಥಾನಕ್ಕಷ್ಟೆ ಸೀಮಿತವಾಗಲಿದೆ. ಇತರರು 43- 48 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದಾರೆ.ರಿಪಬ್ಲಿಕ್ ಟಿವಿ-ಪಿ ಮಾರ್ಕ್ ಸಮೀಕ್ಷೆಯ ಪ್ರಕಾರ, ಎನ್‌ಡಿಎ 359 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು, ಇಂಡಿಯಾ ಮೈತ್ರಿಕೂಟ ಕೇವಲ 154 ಸ್ಥಾನಗಳಲ್ಲಿ ಗೆಲುವು ಪಡೆಯಲಿದೆ. ಇತರರು 30 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ.ಈ ನಾಲ್ಕು ಸಮೀಕ್ಷೆಗಳ ಸರಾಸರಿ ಆಧಾರದಲ್ಲಿ ಎನ್‌ಡಿಎ 350ಕ್ಕಿಂತ ಹೆಚ್ಚು ಹಾಗೂ ಇಂಡಿಯಾ ಮೈತ್ರಿಕೂಟ 125-150 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ‘ಪೋಲ್ ಆಫ್ 4 ಎಕ್ಸಿಟ್ ಪೋಲ್ಸ್ ಅಂದಾಜಿಸಿದೆ. ಉಳಿದ ಸಮೀಕ್ಷೆಗಳೂ ಇದರಿಂದ ಭಿನ್ನವಾಗಿಲ್ಲ

Related posts

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಗಮಕ, ಯಕ್ಷಗಾನದಲ್ಲಿ ವಿಶೇಷ ಸಾಧನೆ: ಮಧೂರು ಮೋಹನ ಕಲ್ಲೂರಾಯರಿಗೆ ರಾಜ್ಯ ಪ್ರಶಸ್ತಿ

Suddi Udaya

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಚಂದ್ರನ ಮೇಲೆ ಸ್ಪರ್ಶ, ಎಕ್ಸೆಲ್ ನಲ್ಲಿ ಹರ್ಷ

Suddi Udaya
error: Content is protected !!