April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು ಎಂದು ಧರ್ಮಸ್ಥಳ ಪ್ರಾಥಮಿಕವಾಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ, ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ, ಧನಲಕ್ಷ್ಮಿ ಜನಾರ್ಧನ್,ಪ್ರಭಾಕರ ಗೌಡ ಬೊಳ್ಮ,ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ,ತಂಗಚ್ಚನ್ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು ಪದ್ಮಾವತಿ ದಂಪತಿಯನ್ನು ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ತಾಯಿ ದೇವಕಿ, ಸಂಘದ ಸದಸ್ಯರು ಹಾಜರಿದ್ದರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಚಾರಣ, ಸ್ವಚ್ಚತಾ ಆಂದೋಲನ ಮತ್ತು ಯುವ ದಿನಾಚರಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ಬೆಳ್ತಂಗಡಿ: ವಿನು ಬಳಂಜ ನಿದೇ೯ಶನದ “ಬೇರ” ಚಲನಚಿತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya
error: Content is protected !!