22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ಮೇ 31ರಂದು ನಿವೃತ್ತರಾದ ಎಂ.ಶ್ರೀನಿವಾಸ ನಾಯ್ಕರಿಗೆ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

1987ರಿಂದ ಜವಾನರಾಗಿ ವೃತ್ತಿ ಜೀವನ ಪ್ರಾರಂಭಿಸಿ, ಗುಮಾಸ್ತ, ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಒಟ್ಟು 37 ವರ್ಷ ಸಂಘದಲ್ಲಿ ಕರ್ತವ್ಯ ನಿರ್ವಹಿಸಿದರು ಎಂದು ಧರ್ಮಸ್ಥಳ ಪ್ರಾಥಮಿಕವಾಗಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹೇಳಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ, ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ, ಧನಲಕ್ಷ್ಮಿ ಜನಾರ್ಧನ್,ಪ್ರಭಾಕರ ಗೌಡ ಬೊಳ್ಮ,ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ,ತಂಗಚ್ಚನ್ ಮತ್ತು ಸಿಬ್ಬಂದಿಗಳು ಹಾಜರಿದ್ದು ನಿವೃತ್ತ ಶ್ರೀನಿವಾಸ ನಾಯ್ಕ ಮತ್ತು ಪದ್ಮಾವತಿ ದಂಪತಿಯನ್ನು ಸನ್ಮಾನ ಮಾಡಿ ಗೌರವಿಸಿದರು. ಈ ಸಂದರ್ಭದಲ್ಲಿ ಅವರ ತಾಯಿ ದೇವಕಿ, ಸಂಘದ ಸದಸ್ಯರು ಹಾಜರಿದ್ದರು.

Related posts

ದ.ಕ. ಜಿಲ್ಲೆಯ ಹೆಚ್ಚಿನ ರೈತರಿಗೆ ಬೆಳೆ ಸಾಲ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಫಲ:ಅಗತ್ಯವಿರುವ ನಿಧಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ ಅವರಿಗೆ ಆಗ್ರಹ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು ಪೊಲೀಸ್ ಠಾಣಾ ಪಿಎಸ್ಐ ಆಗಿ ಅಕ್ಷಯ್ ಡಿ ನೇಮಕ

Suddi Udaya
error: Content is protected !!