38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರದ ವಸಂತ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಶುಭ ಹಾರೈಸಿದರು.


ಹೊಸದಾಗಿ ಸೇರಿದ ಮಕ್ಕಳಿಗೆ ಪನ್ನೀರು ಹಾಕಿ, ಆರತಿ ಬೆಳಗಿ ಸ್ವಾಗತ ಕೋರಲಾಯಿತು. ಮಕ್ಕಳಿಗೆ ಪುಸ್ತಕ, ಬಳಪ, ಸ್ಲೇಟು ಕೊಟ್ಟು ಬರಮಾಡಿಕೊಳ್ಳಲಾಯಿತು.


ಶಾಲಾ ಮುಖ್ಯ ಗುರುಗಳಾದ ಪಿ.ಸುಬ್ರಹ್ಮಣ್ಯ ರಾವ್ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಯಂಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕ ವೃoದ ದದವರು ಸಹಕಾರವಿತ್ತರು.

Related posts

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಮುಂಡಾಜೆ ಯುವ ವಾಹಿನಿ ಸಂಚಲನಾ ಸಮಿತಿ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!