July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರದ ವಸಂತ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಶುಭ ಹಾರೈಸಿದರು.


ಹೊಸದಾಗಿ ಸೇರಿದ ಮಕ್ಕಳಿಗೆ ಪನ್ನೀರು ಹಾಕಿ, ಆರತಿ ಬೆಳಗಿ ಸ್ವಾಗತ ಕೋರಲಾಯಿತು. ಮಕ್ಕಳಿಗೆ ಪುಸ್ತಕ, ಬಳಪ, ಸ್ಲೇಟು ಕೊಟ್ಟು ಬರಮಾಡಿಕೊಳ್ಳಲಾಯಿತು.


ಶಾಲಾ ಮುಖ್ಯ ಗುರುಗಳಾದ ಪಿ.ಸುಬ್ರಹ್ಮಣ್ಯ ರಾವ್ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಯಂಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕ ವೃoದ ದದವರು ಸಹಕಾರವಿತ್ತರು.

Related posts

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya
error: Content is protected !!