29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ 2024 – 25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಶಾಲೆಯ ಆಡಳಿತ ಮಂಡಳಿಯವರು ಎಲ್ಲಾ ತರಗತಿಗಳ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಿದ ಬರೆಯುವ ಪುಸ್ತಕಗಳ ವಿತರಣಾ ಸಮಾರಂಭ ಜರಗಿತು.

ಸಮಾರಂಭದ ಉದ್ಘಾಟಕರಾಗಿ ಆಗಮಿಸಿದ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಆಡಳಿತ ಸಮಿತಿಯ ಕಾರ್ಯದರ್ಶಿಗಳಾದ ದುರ್ಗಾಪ್ರಸಾದ್ ಕೆರ್ಮುಣ್ಣಾಯರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಶಾಲೆಯೆಂದರೆ ಕೇವಲ ಪಾಠ, ಪರೀಕ್ಷೆ, ಫಲಿತಾಂಶ ನೀಡುವ ಕೇಂದ್ರವಲ್ಲ. ಅಲ್ಲಿ ನಡೆಸುವ ಇತರ ಚಟುವಟಿಕೆಗಳೂ ಅಷ್ಟೇ ಮುಖ್ಯವಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗಳೂ ಒಂದೊಂದು ವಿಭಾಗದಲ್ಲಿ ಪ್ರವೀಣರಿರುತ್ತಾರೆ. ಎಲ್ಲವೂ ಸೇರಿ ಸತ್ವಯುತ ಕಲಿಕೆಯಾಗುತ್ತದೆ. ಆ ಮೂಲಕ ಪರಸ್ಪರ ವಿಶ್ವಾಸವನ್ನು ಬೆಳೆಸಿಕೊಂಡು ಯಶಸ್ವೀ ವಿದ್ಯಾರ್ಥಿಗಳಾಗಬೇಕು ಎಂದು ಹಾರೈಸಿದರು.

ಅತಿಥಿಗಳಾಗಿ ಆಗಮಿಸಿದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶೇಖರ ಗೌಡ ಕೊಲ್ಲಿಮಾರ್ ಮತ್ತು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲರವರು ಶುಭಹಾರೃಸಿದರು. ಶಾಲೆಯ ಶಿಕ್ಷಕ ಸಿಬ್ಬಂದಿಗಳೆಲ್ಲರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿಯವರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು, ಹಿರಿಯ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ವಂದಿಸಿ, ಶಿಕ್ಷಕ ಸುಮನ್ ಯು ಎಸ್ ರವರು ಕಾರ್ಯಕ್ರಮ ನಿರೂಪಿಸಿದರು.

Related posts

ರೆಖ್ಯದಲ್ಲಿ ಕಾಂಗ್ರೆಸ್ ಬೂತ್ ಮಟ್ಟದ ಸಭೆ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಗತಿಯ ಸಮಾರೋಪ ಸಮಾರಂಭ

Suddi Udaya
error: Content is protected !!