ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಪಂಚಾಯತ್‌ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರನ್ನು ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭವು ಮೇ 31ರಂದು ಬೆಳ್ತಂಗಡಿಯ ಅಂಬೇಡ್ಕ‌ರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್‌ ರಾಜ್ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್‌ಗಳಾದ ಸುಜಿತ್ ಹಾಗೂ ಹರ್ಷಿತ್, ಇಂಜಿನಿಯರ್ ಹರೀಶ್ ಕಾರಿಂಜ, ಬೆಳ್ತಂಗಡಿ ತಾಲೂಕು ಸಿವಿಲ್‌ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಗಿರಿರಾಜ ಬಾರಿತ್ತಾಯ, ಕಾರ್ಯದರ್ಶಿ ಕೃಷ್ಣ ಕುಮಾ‌ರ್, ಇಲಾಖೆಯ ಸಿಬ್ಬಂದಿಗಳು, ಸಿವಿಲ್‌ ಗುತ್ತಿಗೆದಾರರ ಸಂಘದ ಸದಸ್ಯರು ಹಾಗೂ ನಿವೃತ್ತರ ಸ್ನೇಹಿತರು ಭಾಗವಹಿಸಿದ್ದರು.

ಸರಕಾರಿ ಸೇವೆಯಿಂದ ನಿವೃತ್ತರಾದ ಎಂ.ಆರ್. ಪ್ರಸನ್ನ ಹಾಗೂ ಅವರ ಧರ್ಮಪತ್ನಿ ಜಲಜಾರನ್ನು ಸಮ್ಮಾನಿಸಿ ಗೌರವಿಸಲಾಯಿತು. ಎಂ.ಆ‌ರ್. ಪ್ರಸನ್ನ ಮಾತನಾಡಿ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರಲ್ಲದೇ; ತನಗೆ ನೀಡಿದ ಆತ್ಮೀಯ ಸಮ್ಮಾನಕ್ಕೆ ಅಭಿವಂದನೆ ಸಲ್ಲಿಸಿದರು.

Leave a Comment

error: Content is protected !!