September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರನ್ನು ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭವು ಮೇ 31ರಂದು ಬೆಳ್ತಂಗಡಿಯ ಅಂಬೇಡ್ಕ‌ರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್‌ ರಾಜ್ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್‌ಗಳಾದ ಸುಜಿತ್ ಹಾಗೂ ಹರ್ಷಿತ್, ಇಂಜಿನಿಯರ್ ಹರೀಶ್ ಕಾರಿಂಜ, ಬೆಳ್ತಂಗಡಿ ತಾಲೂಕು ಸಿವಿಲ್‌ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಗಿರಿರಾಜ ಬಾರಿತ್ತಾಯ, ಕಾರ್ಯದರ್ಶಿ ಕೃಷ್ಣ ಕುಮಾ‌ರ್, ಇಲಾಖೆಯ ಸಿಬ್ಬಂದಿಗಳು, ಸಿವಿಲ್‌ ಗುತ್ತಿಗೆದಾರರ ಸಂಘದ ಸದಸ್ಯರು ಹಾಗೂ ನಿವೃತ್ತರ ಸ್ನೇಹಿತರು ಭಾಗವಹಿಸಿದ್ದರು.

ಸರಕಾರಿ ಸೇವೆಯಿಂದ ನಿವೃತ್ತರಾದ ಎಂ.ಆರ್. ಪ್ರಸನ್ನ ಹಾಗೂ ಅವರ ಧರ್ಮಪತ್ನಿ ಜಲಜಾರನ್ನು ಸಮ್ಮಾನಿಸಿ ಗೌರವಿಸಲಾಯಿತು. ಎಂ.ಆ‌ರ್. ಪ್ರಸನ್ನ ಮಾತನಾಡಿ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರಲ್ಲದೇ; ತನಗೆ ನೀಡಿದ ಆತ್ಮೀಯ ಸಮ್ಮಾನಕ್ಕೆ ಅಭಿವಂದನೆ ಸಲ್ಲಿಸಿದರು.

Related posts

ಜೇಸಿ ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ: ಸ್ಥಾಪಕ ಚೇರ್ಮನ್ ಆಗಿ ಅಭಿನಂದನ್ ಹರೀಶ್ ಪದ ಸ್ವೀಕಾರ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!