July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಪಂಚಾಯತ್‌ ರಾಜ್‌ ಇಂಜಿನಿಯರಿಂಗ್ ಇಲಾಖೆಯ ಬೆಳ್ತಂಗಡಿ, ಬಂಟ್ವಾಳ ಮತ್ತು ಬೈಂದೂರು ಉಪವಿಭಾಗಗಳಲ್ಲಿ 34 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ, ಮೇ 31ರಂದು ವೃತ್ತಿಯಿಂದ ವಯೋ ನಿವೃತ್ತಿ ಹೊಂದಿದ ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರನ್ನು ಆತ್ಮೀಯವಾಗಿ ಬೀಳ್ಕೊಡುವ ಸಮಾರಂಭವು ಮೇ 31ರಂದು ಬೆಳ್ತಂಗಡಿಯ ಅಂಬೇಡ್ಕ‌ರ್ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್‌ ರಾಜ್ ಇಲಾಖೆಯ ಬೆಳ್ತಂಗಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್‌ಗಳಾದ ಸುಜಿತ್ ಹಾಗೂ ಹರ್ಷಿತ್, ಇಂಜಿನಿಯರ್ ಹರೀಶ್ ಕಾರಿಂಜ, ಬೆಳ್ತಂಗಡಿ ತಾಲೂಕು ಸಿವಿಲ್‌ ಗುತ್ತಿಗೆದಾರರ ಸಂಘದ ಗೌರವಾಧ್ಯಕ್ಷ ಗಿರಿರಾಜ ಬಾರಿತ್ತಾಯ, ಕಾರ್ಯದರ್ಶಿ ಕೃಷ್ಣ ಕುಮಾ‌ರ್, ಇಲಾಖೆಯ ಸಿಬ್ಬಂದಿಗಳು, ಸಿವಿಲ್‌ ಗುತ್ತಿಗೆದಾರರ ಸಂಘದ ಸದಸ್ಯರು ಹಾಗೂ ನಿವೃತ್ತರ ಸ್ನೇಹಿತರು ಭಾಗವಹಿಸಿದ್ದರು.

ಸರಕಾರಿ ಸೇವೆಯಿಂದ ನಿವೃತ್ತರಾದ ಎಂ.ಆರ್. ಪ್ರಸನ್ನ ಹಾಗೂ ಅವರ ಧರ್ಮಪತ್ನಿ ಜಲಜಾರನ್ನು ಸಮ್ಮಾನಿಸಿ ಗೌರವಿಸಲಾಯಿತು. ಎಂ.ಆ‌ರ್. ಪ್ರಸನ್ನ ಮಾತನಾಡಿ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ಸ್ಮರಿಸಿ, ಕೃತಜ್ಞತೆ ಸಲ್ಲಿಸಿದರಲ್ಲದೇ; ತನಗೆ ನೀಡಿದ ಆತ್ಮೀಯ ಸಮ್ಮಾನಕ್ಕೆ ಅಭಿವಂದನೆ ಸಲ್ಲಿಸಿದರು.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 8.08 ಲಕ್ಷ ಲಾಭ, ಶೇ. 8 ಡಿವಿಡೆಂಟ್ ಘೋಷಣೆ

Suddi Udaya

ಧರ್ಮಸ್ಥಳ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ವರ ವಿರುದ್ದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.98.79 ಫಲಿತಾಂಶ

Suddi Udaya
error: Content is protected !!