23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

ವೇಣೂರು : ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು , ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವೇಣೂರು ಇದರ ವತಿಯಿಂದ ಬೆಳ್ತಂಗಡಿಯ ಜನಪ್ರಿಯ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿ ನಮನ ಕಾರ್ಯಕ್ರಮ ವೇಣೂರು ಲಯನ್ಸ್ ಕ್ಲಬ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಜಯರಾಮ ಶೆಟ್ಟಿ ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು.

ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು ಇದರ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಬಂಗೇರರು ತನ್ನ ಜೀವನದ ಉದ್ದಕ್ಕೂ ಬಡವರ ಏಳಿಗೆಯನ್ನು ಬಯಸಿದವರು ಎಂದರು.

ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಗುಣಪ್ರಸಾದ್ ಕಾರಂದೂರು ,ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ ಪೂಜಾರಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಪ್ರಭಾಕರ ಹೆಗ್ಡೆ ಹಟ್ಟಾಜೆ ಗುತ್ತು, ಹಿರಿಯರಾದ ಮಹಮ್ಮದ್ ಸಾಹೇಬ್, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ಪ್ರಸಾದ್ ಎಂ ಕೆ , ಆರಾಧನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಭಟ್,ಗ್ರಾಮ ಪಂ ಸದಸ್ಯರಾದ ಅನೂಪ್ ಜೆ ಪಾಯಸ್ , ಹರೀಶ್ ಪಿ ಎಸ್ , ಸುನೀಲ್ ಬಜಿರೆ, ಸುರೇಶ್ ಅಂಡಿಂಜೆ, ಪ್ರಮುಖರಾದ ವಿಶ್ವನಾಥ ದಡ್ಡಲ್ ಪಲ್ಕೆ, ವಿಕ್ಟರ್, ರಮೇಶ್ ಪಡ್ಡಾಯಿಮಜಲು, ದಯಾನಂದ ದೇವಾಡಿಗ, ಸತೀಶ್ ಉಜಿರ್ದಡ್ಡ, ಸತೀಶ್ ಕಜಿಪಟ್ಟ, ನವೀನ್ ಪಚೇರಿ, ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ.ಗು.ನಾ.ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ನಿತೀಶ್ ಹೆಚ್ ಕೋಟ್ಯಾನ್ ಸ್ವಾಗತಿಸಿ, ವೇಣೂರು ಶ್ರೀ.ಗು.ನಾ.ಸ್ವಾ. ಸೇ.ಸಂಘದ ಕಾರ್ಯದರ್ಶಿ ರಾಕೇಶ್ ಕುಮಾರ್ ನಿರೂಪಿಸಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ನಿರ್ದೇಶಕ ಅರುಣ್ ಕೋಟ್ಯಾನ್ ವಂದಿಸಿದರು.

Related posts

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya
error: Content is protected !!