23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.


ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರದ ವಸಂತ ಭಟ್ ಇವರು ದೀಪ ಬೆಳಗಿಸಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ಮಕ್ಕಳಿಗೆ ಶುಭ ಹಾರೈಸಿದರು.


ಹೊಸದಾಗಿ ಸೇರಿದ ಮಕ್ಕಳಿಗೆ ಪನ್ನೀರು ಹಾಕಿ, ಆರತಿ ಬೆಳಗಿ ಸ್ವಾಗತ ಕೋರಲಾಯಿತು. ಮಕ್ಕಳಿಗೆ ಪುಸ್ತಕ, ಬಳಪ, ಸ್ಲೇಟು ಕೊಟ್ಟು ಬರಮಾಡಿಕೊಳ್ಳಲಾಯಿತು.


ಶಾಲಾ ಮುಖ್ಯ ಗುರುಗಳಾದ ಪಿ.ಸುಬ್ರಹ್ಮಣ್ಯ ರಾವ್ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಯಂಸಿ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ವತಿಯಿಂದ ಸಿಹಿ ತಿಂಡಿ ವಿತರಿಸಲಾಯಿತು. ಕಾರ್ಯಕ್ರಮಕ್ಕೆ ಎಲ್ಲಾ ಶಿಕ್ಷಕ ವೃoದ ದದವರು ಸಹಕಾರವಿತ್ತರು.

Related posts

ಮಹೇಶ್ ಶೆಟ್ಟಿ ತಿಮರೋಡಿಗೆಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಾಗಾರ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೂರ್ಯ ವಂದನಾ ಭಜನಾ ಉತ್ಸವದ ಪೂರ್ವ ತಯಾರಿ ಸಭೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!