ನವೀಕೃತಗೊಂಡ ಉಜಿರೆ ಹಳೇಪೇಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಸ್ತಾಂತರ

Suddi Udaya

ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲೂಕು ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31ರಂದು ಶಾಲೆಯಲ್ಲಿ ನಡೆದ ಪ್ರಾರಂಭೋತ್ಸವ ಸಮಾರಂಭದಲ್ಲಿ ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾದ ಅನಂತ ಭಟ್ ಮಚ್ಚಿಮಲೆ ಶುಭ ಹಾರೈಸಿ, ಸಮಸ್ಯೆಯನ್ನು ಸೇವೆಯ ಅವಕಾಶವಾಗಿ ಪರಿವರ್ತಿಸಿ ಕೇವಲ ಎರಡು ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲಾ ಕಟ್ಟಡ ನವೀಕರಣಗೊಳಿಸಿರುವುದಕ್ಕೆ ಸಕ್ರಿಯ ಸಹಕಾರ ನೀಡಿದ ಎಲ್ಲರನ್ನೂ ಧನ್ಯತೆಯಿಂದ ಸ್ಮರಿಸಿದರು.

ಶಾಲೆಯಲ್ಲಿ ಕಲಿಕೆಗೆ ಪೂರಕ ವಾತಾವರಣವಿದ್ದಲ್ಲಿ ಕಲಿಯುವಿಕೆ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ವಿದ್ಯೆ ಮತ್ತು ಬೆಳಕು ಇತರರಿಗೆ ಕೊಟ್ಟಷ್ಟು ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ ಶುಭ ಹಾರೈಸಿದರು.

ಶಾಲಾ ನವೀಕರಣ ಕಾರ್ಯದಲ್ಲಿ ಸಹಕರಿಸಿದ ರಜನೀಶ್, ಶಶಿ ಆಚಾರ್ ಬೆಳಾಲು, ಸುರೇಶ್, ಅಶೋಕ ನಾಯ್ಕ ಮತ್ತು ಮಧುಕರ ಅವರನ್ನು ಗೌರವಿಸಲಾಯಿತು.

ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ ಕುಮಾರ್ ಮತ್ತು ರಾಜೇಶ್ ಪೈ, ಪುಷ್ಪರಾಜ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಮೋಹನ್, ಇಂಜಿನಿಯರ್ ವಿದ್ಯಾಕುಮಾರ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಆರತಿ ಉಪಸ್ಥಿತಿರಿದ್ದರು.

ಗುಲಾಬಿ ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಸ್ವಾಗತಿಸಿ, ಕೊನೆಯಲ್ಲಿ ಧನ್ಯವಾದವಿತ್ತರು.

Leave a Comment

error: Content is protected !!