23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಲಾಯಿಲ :ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ ಶಾಲೆಯ ಪ್ರಾರಂಭೋತ್ಸವ ಮೇ 31 ರಂದು ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಯಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸೌಮ್ಯ ವಹಿಸಿದರು.

ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ ಗಣೇಶ್. ಆರ್ ಗ್ರಾಮ ಪಂಚಾಯತ್ ಸದಸ್ಯರಾದ ಅರವಿಂದ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಜಗನ್ನಾಥ್. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರಾದ ಶ್ರೀಮತಿ ಗಂಗಾರಾಣಿ ಜೋಶಿ ಸ್ವಾಗತಿಸಿದರು. ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿದರು ಕೃಷ್ಣಕುಮಾರ್ ವಂದಿಸಿದರು.

ವೇದಿಕೆಯಲ್ಲಿದ್ದ ಗಣ್ಯರು ಉಚಿತ ಸಮವಸ್ತ್ರ , ಪುಸ್ತಕ ವಿತರಿಸಿದರು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಿ ಬ್ಯಾಂಡ್ ಸೆಟ್ ನೊಂದಿಗೆ ಗ್ರಾಮ ಪಂಚಾಯತ್ ಬಳಿಯಿಂದ ಮೆರವಣಿಗೆಯ ಮೂಲಕ ಶಿಕ್ಷಕರು ,ಪೋಷಕರು, ವಿದ್ಯಾರ್ಥಿಗಳೊಂದಿಗೆ ಆಗಮಿಸಿದರು. ಪುಟ್ಟ ಮಕ್ಕಳಿಗೆ ಗುಲಾಬಿ ನೀಡುವ ಮೂಲಕ ಶಾಲೆಗೆ ಸ್ವಾಗತಿಸಲಾಯಿತು.

Related posts

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya
error: Content is protected !!