July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕರ್ನೋಡಿ ಸ.ಉ.ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

ಲಾಯಿಲ :ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ ಲಾಯಿಲ ಶಾಲೆಯ ಪ್ರಾರಂಭೋತ್ಸವ ಮೇ 31 ರಂದು ನಡೆಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಗಂಧಿ ಜಗನ್ನಾಥ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಯಾಟಿಸಿ ಶುಭ ಹಾರೈಸಿದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಶ್ರೀಮತಿ ಸೌಮ್ಯ ವಹಿಸಿದರು.

ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಕಾರ್ಯದರ್ಶಿ ಗಣೇಶ್. ಆರ್ ಗ್ರಾಮ ಪಂಚಾಯತ್ ಸದಸ್ಯರಾದ ಅರವಿಂದ್ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಜಗನ್ನಾಥ್. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರಾದ ಶ್ರೀಮತಿ ಗಂಗಾರಾಣಿ ಜೋಶಿ ಸ್ವಾಗತಿಸಿದರು. ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿದರು ಕೃಷ್ಣಕುಮಾರ್ ವಂದಿಸಿದರು.

ವೇದಿಕೆಯಲ್ಲಿದ್ದ ಗಣ್ಯರು ಉಚಿತ ಸಮವಸ್ತ್ರ , ಪುಸ್ತಕ ವಿತರಿಸಿದರು. ಶಾಲೆಯನ್ನು ತಳಿರು ತೋರಣಗಳಿಂದ ಶೃಂಗರಿಸಿ ಬ್ಯಾಂಡ್ ಸೆಟ್ ನೊಂದಿಗೆ ಗ್ರಾಮ ಪಂಚಾಯತ್ ಬಳಿಯಿಂದ ಮೆರವಣಿಗೆಯ ಮೂಲಕ ಶಿಕ್ಷಕರು ,ಪೋಷಕರು, ವಿದ್ಯಾರ್ಥಿಗಳೊಂದಿಗೆ ಆಗಮಿಸಿದರು. ಪುಟ್ಟ ಮಕ್ಕಳಿಗೆ ಗುಲಾಬಿ ನೀಡುವ ಮೂಲಕ ಶಾಲೆಗೆ ಸ್ವಾಗತಿಸಲಾಯಿತು.

Related posts

ವ್ಯಾಪಕ ಮಳೆ: ಜು.9 ದ.ಕ. ಜಿಲ್ಲಾದ್ಯಂತ ಶಾಲೆ-ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ತೋಟತ್ತಾಡಿಯಲ್ಲಿ ಗೇರು ತೋಟಕ್ಕೆ ಬೆಂಕಿ

Suddi Udaya

ತೆಂಕಕಾರಂದೂರು: ಸ.ಕಿ.ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya
error: Content is protected !!