September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

ವೇಣೂರು : ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು , ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವೇಣೂರು ಇದರ ವತಿಯಿಂದ ಬೆಳ್ತಂಗಡಿಯ ಜನಪ್ರಿಯ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿ ನಮನ ಕಾರ್ಯಕ್ರಮ ವೇಣೂರು ಲಯನ್ಸ್ ಕ್ಲಬ್ ನಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಜಯರಾಮ ಶೆಟ್ಟಿ ದೀಪ ಬೆಳಗಿಸಿ ನುಡಿ ನಮನ ಸಲ್ಲಿಸಿದರು.

ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು ಇದರ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಬಂಗೇರರು ತನ್ನ ಜೀವನದ ಉದ್ದಕ್ಕೂ ಬಡವರ ಏಳಿಗೆಯನ್ನು ಬಯಸಿದವರು ಎಂದರು.

ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಗುಣಪ್ರಸಾದ್ ಕಾರಂದೂರು ,ವೇಣೂರು ಯುವವಾಹಿನಿ ಘಟಕದ ಅಧ್ಯಕ್ಷ ಶುಭಕರ ಪೂಜಾರಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಪ್ರಭಾಕರ ಹೆಗ್ಡೆ ಹಟ್ಟಾಜೆ ಗುತ್ತು, ಹಿರಿಯರಾದ ಮಹಮ್ಮದ್ ಸಾಹೇಬ್, ಯುವ ಬಿಲ್ಲವ ವೇದಿಕೆ ಬೆಳ್ತಂಗಡಿ ಇದರ ಅಧ್ಯಕ್ಷ ಪ್ರಸಾದ್ ಎಂ ಕೆ , ಆರಾಧನಾ ಸಮಿತಿ ಸದಸ್ಯರಾದ ಬಾಲಕೃಷ್ಣ ಭಟ್,ಗ್ರಾಮ ಪಂ ಸದಸ್ಯರಾದ ಅನೂಪ್ ಜೆ ಪಾಯಸ್ , ಹರೀಶ್ ಪಿ ಎಸ್ , ಸುನೀಲ್ ಬಜಿರೆ, ಸುರೇಶ್ ಅಂಡಿಂಜೆ, ಪ್ರಮುಖರಾದ ವಿಶ್ವನಾಥ ದಡ್ಡಲ್ ಪಲ್ಕೆ, ವಿಕ್ಟರ್, ರಮೇಶ್ ಪಡ್ಡಾಯಿಮಜಲು, ದಯಾನಂದ ದೇವಾಡಿಗ, ಸತೀಶ್ ಉಜಿರ್ದಡ್ಡ, ಸತೀಶ್ ಕಜಿಪಟ್ಟ, ನವೀನ್ ಪಚೇರಿ, ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಬೆಳ್ತಂಗಡಿ ಶ್ರೀ.ಗು.ನಾ.ಸ್ವಾಮಿ ಸೇವಾ ಸಂಘದ ಕಾರ್ಯದರ್ಶಿ ನಿತೀಶ್ ಹೆಚ್ ಕೋಟ್ಯಾನ್ ಸ್ವಾಗತಿಸಿ, ವೇಣೂರು ಶ್ರೀ.ಗು.ನಾ.ಸ್ವಾ. ಸೇ.ಸಂಘದ ಕಾರ್ಯದರ್ಶಿ ರಾಕೇಶ್ ಕುಮಾರ್ ನಿರೂಪಿಸಿ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ನಿರ್ದೇಶಕ ಅರುಣ್ ಕೋಟ್ಯಾನ್ ವಂದಿಸಿದರು.

Related posts

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಗುರುವಾಯನಕೆರೆಯಲ್ಲಿ ಚಿನ್ನ, ಬೆಳ್ಳಿ ಖರೀದಿಸುವ ನೆಪದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಚಿನ್ನಾಭರಣ ಕಳವು: ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಬೆಳ್ತಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ಸ್ವೀಕಾರ – ಪ್ರತಿಭಾ ಪುರಸ್ಕಾರ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya
error: Content is protected !!