26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು.

ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ಮೂರು ವರ್ಷದ ಹಿಂದೆ ಅಂದರೆ ಕೊರೋನ ಸಂಧರ್ಭದಲ್ಲಿ ನಡೆದ ಫೇಸ್ ಮೇಕರ್ ಅಪರೇಷನ್ ನಂತರ ಗುಣಮುಖರಾಗದೇ ಹೆಚ್ಚಾಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಇವರು ಮೇ.31ರಂದು ನಿಧನರಾದರು.

ಒಂದು ವರ್ಷದ ಹಿಂದೆ ದೇಹದಾನ ಮಾಡಬೇಕೆನ್ನುವ ತನ್ನ ಮನದ ಆಸೆಯನ್ನು ಸಂಬಂಧಿಕರಲ್ಲಿ ತಿಳಿಸಿ, ಮಣಿಪಾಲ ಮೆಡಿಕಲ್ ಕಾಲೇಜಿಗೆ ಬರೆದು ಕೊಟ್ಟಿದ್ದರು. ಅಂತೆಯೇ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ನೀಡಲಾಯಿತು. ಮೃತರು ಪತಿ ಜಗದೀಶ್ ರಾವ್, ಸಹೋದರ, ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕರಿಮಣೇಲು: ಗಾಂಧಿನಗರ ನಿವಾಸಿ ಹಸನಬ್ಬ ನಿಧನ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya

ಪಟ್ರಮೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವ: ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!