22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪ

—————————————————

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ ಇದ್ದು, ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಪರಪ್ಪು ರಸ್ತೆ ಬದಿಯ ಸಮೀಪದ ಸುಣ್ಣಲಡ್ಡ ಕಾಂಪ್ಲೆಕ್ಸ್ ಹತ್ತಿರದ ನೆಲಕ್ಕೆ ಹಾಕಿಕೊಂಡಿರುವ ಅಕೇಶಿಯ ಮರಕ್ಕೆ ತಂತಿ ತಾಗುವುದಕ್ಕೆ ಕೇವಲ (½)ಅರ್ಧ ಅಡಿ ಮಾತ್ರ ಇದೆ.

ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪದ ಮಾರ್ಗ ಬದಿಯಲ್ಲಿ ರುವ ಅಪಾಯಕಾರಿ ಒಣಗಿದ ಮರವೊಂದಿದ್ದು, ಸಾವಿರಾರು ವಾಹನ, ಜನರು ಓಡಾಡುವ ಸ್ಥಳ ಇದಾಗಿದೆ.


ಪೆಲತ್ತಳಿಕೆ ಕಾಸಿಂ ಮನೆಯ ತೋಟದಲ್ಲಿ ಹಾಗೂ ಸಾರ್ವಜನಿಕ ಟಾರು ರಸ್ತೆಯ ಪಕ್ಕದಲ್ಲಿರುವ 3 ವರ್ಷಗಳ ಹಿಂದೆ ಒಣಗಿದ ಅಪಾಯದಲ್ಲಿರುವ ಮರವೊಂದಿದೆ.

ದೇರ್ಜಾಲು ಅನಂದ ಪೂಜಾರಿ ಯವರ ತೋಟದಲ್ಲಿ ಬಾಳೆ ಗಿಡ ಮತ್ತು ಹಲಸಿನ ಮರದ ಕೊಂಬೆಗಳು ವಿದ್ಯುತ್ ಸ್ಪರ್ಶಿಸಿ ಸುಟ್ಟು ಕರಕಲಾಗಿದೆ.

ರಕ್ತೇಶ್ವರಿಪದವು ಕ್ರಾಸ್ ರಸ್ತೆ ಮೇಲ್ಬಾಗದಲ್ಲಿ ತಂತಿಯ ಮೇಲೆ ಮರದ ಕೊಂಬೆ ತಾಗುತ್ತಿವೆ. (ಕಳೆದ ತಿಂಗಳು ಬೈ ಹುಲ್ಲಿನ ವಾಹನಕ್ಕೆ ಬೆಂಕಿ ತಗುಲಿದ ಹತ್ತಿರದ ಸ್ಥಳ),

ಪೇಲತ್ತಳಿಕ್ಕೆ ಮನೆಯ ಮುಂಭಾಗದಲ್ಲಿರುವ ತಂತಿಗಳು ಮರಕ್ಕೆ ತಾಗುತ್ತಿವೆ ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರ

Related posts

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಚಿವ ಪೊನ್ನಂ ಪ್ರಭಾಕರ್ ಭೇಟಿ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya
error: Content is protected !!