24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

ಬೆಳ್ತಂಗಡಿ : ಕಳೆಂಜ ಗ್ರಾಮದ ಲೋಲಾಕ್ಷ ಅವರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಧರ್ಮಸ್ಥಳ ಪೊಲೀಸರು ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1ರಂದು (ದೋಷರೋಪ ಪಟ್ಟಿ)ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಕಳೆದ ವರ್ಷ 2023 ಅಕ್ಟೋಬರ್ ತಿಂಗಳಲ್ಲಿ ಕಳೆಂಜ ಗ್ರಾಮದ ಲೋಲಾಕ್ಷಎಂಬವರು ನೂತನ ಮನೆನಿಮಿ೯ಸಿದ ಜಾಗ ಮೀಸಲು ಅರಣ್ಯ ಎಂದು ಆರೋಪಿಸಿದ ಉಪ್ಪಿನಂಗಡಿ ಅರಣ್ಯ ಇಲಾಖೆ ಮನೆ ಪಂಚಾಂಗವನ್ನು ಕೆಡವಿ ಹಾಕಿದ್ದರು ಯಾವುದೇ ನೋಟಿಸ್ ನೀಡಿದೆ ಏಕಾಏಕಿ ಬಂದು ಮನೆ ದೂಡಿ ಹಾಕಿರುವುದನ್ನು ವಿರೋಧಿಸಿ ಶಾಸಕ ಹರೀಶ್ ಪೂಂಜ ಉಪಸ್ಥಿತಿಯಲ್ಲಿ ಮನೆ ನಿರ್ಮಾಣ ಮಾಡಲಾಗಿತ್ತು .ನಂತರ ಅರಣ್ಯ ಇಲಾಖೆ ಮನೆಯನ್ನು ತೆರವು ಮಾಡಲು ಅ.9 ರಂದು ಮುಂದಾದಾಗ ಸ್ಥಳೀಯರು ಪ್ರತಿಭಟನೆ ನಡೆಸಿದಾಗ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ, ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಜಿಲ್ಲೆಯ ಶಾಸಕರು ಆಗಮಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ಕಾಯ೯ವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆಧರ್ಮಸ್ಥಳ ಪೊಲೀಸ್‌ ಠಾಣೆಗೆ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ಕೆಕೆ ಎಂಬವರು ದೂರು ನೀಡಿದ್ದರು. ದೋಷರೋಪ ಪಟ್ಟಿ ಸಲ್ಲಿಕೆ:ಧರ್ಮಸ್ಥಳ ಪೊಲೀಸರು ತನಿಖೆ ನಡೆಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬೆಳ್ತಂಗಡಿ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಮತ್ತು ಇತರ 15 ಜನ ಸೇರಿ ಒಟ್ಟು 17 ಮಂದಿ ವಿರುದ್ಧ ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಜೂ.1 ರಂದು ದೋಷರೋಪ ಪಟ್ಟಿ ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಶಾಲೆಯಲ್ಲಿ ನಾಯಕತ್ವ ಅಭಿವೃದ್ಧಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಮರೋಡಿ: ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!