23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು.

ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ ಮೂರು ವರ್ಷದ ಹಿಂದೆ ಅಂದರೆ ಕೊರೋನ ಸಂಧರ್ಭದಲ್ಲಿ ನಡೆದ ಫೇಸ್ ಮೇಕರ್ ಅಪರೇಷನ್ ನಂತರ ಗುಣಮುಖರಾಗದೇ ಹೆಚ್ಚಾಗಿ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಇವರು ಮೇ.31ರಂದು ನಿಧನರಾದರು.

ಒಂದು ವರ್ಷದ ಹಿಂದೆ ದೇಹದಾನ ಮಾಡಬೇಕೆನ್ನುವ ತನ್ನ ಮನದ ಆಸೆಯನ್ನು ಸಂಬಂಧಿಕರಲ್ಲಿ ತಿಳಿಸಿ, ಮಣಿಪಾಲ ಮೆಡಿಕಲ್ ಕಾಲೇಜಿಗೆ ಬರೆದು ಕೊಟ್ಟಿದ್ದರು. ಅಂತೆಯೇ ಮೃತದೇಹವನ್ನು ಮೆಡಿಕಲ್ ಕಾಲೇಜಿಗೆ ನೀಡಲಾಯಿತು. ಮೃತರು ಪತಿ ಜಗದೀಶ್ ರಾವ್, ಸಹೋದರ, ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ.

Related posts

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಗೆ ಅಬ್ಬೋನು ಮದ್ದಡ್ಕ ನೇಮಕ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ಯಾಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆಯ ಪ್ರಣಮ್ಯ ಎಂ.ಕೆ. ಭರತನಾಟ್ಯ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya
error: Content is protected !!