33.4 C
ಪುತ್ತೂರು, ಬೆಳ್ತಂಗಡಿ
March 31, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

ಬೆಳ್ತಂಗಡಿ : ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ.

ಪೊಲೀಸರು ಜಾನುವಾರು ಹಾಗೂ ಮಾಂಸ ಮಾಡಲು ಉಪಯೋಗಿಸುವ ಕತ್ತಿ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಪ್ರಕರಣ ಜೂ.1ರಂದು ವರದಿಯಾಗಿದೆ.

ಕರಾಯ ಸಿರಾಜ್‌ ಎಂಬಾತನು ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿರುವ ಬಗ್ಗೆ, ಹಾಗೂ ಪುತ್ತಿಲ ಗ್ರಾಮದ ಪಲ್ಕೆ ಎಂಬಲ್ಲಿ, ಅಶ್ರಪ್‌ ಎಂಬಾತನು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಜೂ. 1 ರಂದು ಪುಂಜಾಲಕಟ್ಟೆ ಪೊಲೀಸ್ ಠಾಣಾ ಪಿಎಸ್ಐ ಉದಯರವಿ ವೈ ಎಂ ರವರು ಹಾಗೂ ಸಿಬ್ಬಂದಿಗಳು, ಆರೋಪಿ ಅಶ್ರಫ್ ಎಂಬಾತನ ಮನೆಯ ಬಳಿ ತೆರಳಿದಾಗ, KA05Z1833ನೇ ವಾಹನದಿಂದ ಜಾನುವಾರುಗಳನ್ನು ಇಳಿಸುತ್ತಿದ್ದ ಆರೋಪಿತನು ಪೊಲೀಸ್ ರನ್ನು ಕಂಡು ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾನೆ.

ಪೊಲೀಸರು ಸ್ಥಳದಲ್ಲಿದ್ದ ಎರಡು ಜಾನುವಾರುಗಳನ್ನು ಹಾಗೂ ಸಾಗಾಟ ಮಾಡಲು ಉಪಯೋಗಿಸಿದ ವಾಹವನ್ನು ಮತ್ತು ವಾಹನದಲ್ಲಿದ್ದ ಮೊಬೈಲ್‍ನ್ನು ಸ್ವಾದೀನಪಡಿಸಿಕೊಂಡಿದ್ದಾರೆ.. ಬಳಿಕ ಸದ್ರಿ ಸ್ಥಳದ ಹತ್ತಿರದಲ್ಲಿಯೇ ಅಕ್ರಮವಾಗಿ ಜಾನುವಾರನ್ನು ಕಡಿದು ಮಾಂಸ ಮಾಡುತ್ತಿದ್ದ, ಸಿರಾಜ್ ಎಂಬಾತನ ಮನೆಯ ಬಳಿ ತೆರಳಿದಾಗ ಸ್ಥಳದಲ್ಲಿದ್ದ ಕರಾಯದ ಸಿರಾಜ್‍ ಹಾಗೂ ಇನ್ನೊಬ್ಬ ಆರೋಪಿ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆತನ ಮನೆಯ ಹಿಂಭಾಗದ ಶೆಡ್ ನಲ್ಲಿ, ಜಾನುವಾರಿನ ಮಾಂಸ ಹಾಗೂ ಮಾಂಸ ಮಾಡಲು ಉಪಯೋಗಿಸಿ ಕತ್ತಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದೆ.

ಸದರಿ ಸೊತ್ತುಗಳನ್ನು ಸ್ವಾದೀನಪಡಿಸಿಕೊಂಡು, ಆರೋಪಿತರಾದ ಅಶ್ರಫ್, ಪಲ್ಕೆ ಮನೆ, ಪುತ್ತಿಲ ಗ್ರಾಮ, ಮತ್ತು ಸಿರಾಜ್‌ ಕರಾಯ ಹಾಗೂ ಇತರರ ವಿರುದ್ಧ ಪುಂಜಾಲಕಟ್ಟೆ ಠಾಣೆಯಲ್ಲಿ, ಅ.ಕ್ರ 38/2024 ಕಲಂ: 4,5,7,12 ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಅಧಿನಿಯಮ 2020 & ಕಲಂ: 11(1)(ಡಿ) ಪ್ರಾಣಿ ಹಿಂಸೆ ತಡೆ ಮತ್ತು ಜಾನುವಾರು ಪರಿರಕ್ಷಣೆ ಅಧಿನಿಯಮ ಕಾಯ್ದೆ 1960 & ಕಲಂ: 66 ಜೊತೆಗೆ 192(ಎ) ಐಎಂವಿ ಆಕ್ಟ್‌, ಕಲಂ: 53(1) ಜೊತೆಗೆ 192 ಐಎಂವಿ ಆಕ್ಟ್‌ ಹಾಗೂ ಕಲಂ: 379 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆ

Suddi Udaya

ನಿಷೇದಿತ ಮಾದಕ ವಸ್ತು ಗಾಂಜಾ ಸೇವಿಸಿ ಸಾವ೯ಜನಿಕ ಸ್ಥಳದಲ್ಲಿ ಅಸಭ್ಯವಾಗಿ ವತ೯ನೆ : ನಾಲ್ಕು ಮಂದಿಯ ಬಂಧನ

Suddi Udaya

ವೇಣೂರು: ವಿ.ಕೆ. ಟ್ರೇಡರ್‍ಸ್ ನೂತನ ಕಾಡುತ್ಪತ್ತಿ ವ್ಯಾಪಾರ ಮಳಿಗೆ ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಎಸ್.ಎಸ್.ಎಲ್.ಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಅಭಿಷೇಕ್ ಗೆ ಬೆಳ್ತಂಗಡಿ ವಕೀಲರ ಸಂಘದಿಂದ ಸನ್ಮಾನ

Suddi Udaya
error: Content is protected !!