24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಪರಿಣಾಮ ಸಂತ್ರಸ್ತೆ ಇದೀಗ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಗ್ಯಾಂಗ್ ರೇಪ್ ಹಾಗೂ ಪೋಕೋ ಅಡಿಯಲ್ಲಿ ಶನಿವಾರ ಪ್ರಕರಣ ದಾಖಲಾಗಿದೆ.

ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮೂಡಬಿದ್ರೆ ನಿವಾಸಿಗಳಾದ ಮಹಮ್ಮದ್ ಇಕ್ಷಾಲ್(26), ಫಾರೂಕ್(19) ಹಾಗೂ 18 ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಲಾಗಿದೆ.ಬೆಳ್ತಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ 18.5 ವಯಸ್ಸಿನ ಬಾಲಕಿಗೆ ಮೂವರು ಯುವಕರು ಬೇರೆ ಬೇರೆ ಸಮಯದಲ್ಲಿ ಬಲತ್ಕಾರ ಮಾಡಿ ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಾಲಕಿ ಮೇ.31 ರಂದು ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಗ್ಯಾಂಗ್ ರೇಪ್ ಮತ್ತು ಪೋಕೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಇಂದು ಮೂವರನ್ನು ಬಂಧಿಸಲಾಗಿದೆ. ಈ ಪೈಕಿ ಇಬ್ಬರನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ನು ಅಪ್ರಾಪ್ತ ಬಾಲಕನನ್ನು ಮಂಗಳೂರು ಬಾಲನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.

Related posts

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 20ನೇ‌ ಧರ್ಮಸ್ಥಳ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಹುಟ್ಟುಹಬ್ಬ ಹಿನ್ನಲೆ ಬಂದಾರು ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷ್ಮೀ ಗ್ರೂಪ್ಸ್ ಕಂಪನಿಯಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿ ನೂತನ ಜಮಾತ್ ಕಮಿಟಿ ರಚನೆ: ನವಾಝ್ ಶರೀಫ್ ಕಟ್ಟೆ 3 ನೇ ಬಾರಿಗೆ ಅಧ್ಯಕ್ಷರಾಗಿ ಪುನರಾಯ್ಕೆ

Suddi Udaya

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya
error: Content is protected !!