23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪ

—————————————————

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ ಇದ್ದು, ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಪರಪ್ಪು ರಸ್ತೆ ಬದಿಯ ಸಮೀಪದ ಸುಣ್ಣಲಡ್ಡ ಕಾಂಪ್ಲೆಕ್ಸ್ ಹತ್ತಿರದ ನೆಲಕ್ಕೆ ಹಾಕಿಕೊಂಡಿರುವ ಅಕೇಶಿಯ ಮರಕ್ಕೆ ತಂತಿ ತಾಗುವುದಕ್ಕೆ ಕೇವಲ (½)ಅರ್ಧ ಅಡಿ ಮಾತ್ರ ಇದೆ.

ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪದ ಮಾರ್ಗ ಬದಿಯಲ್ಲಿ ರುವ ಅಪಾಯಕಾರಿ ಒಣಗಿದ ಮರವೊಂದಿದ್ದು, ಸಾವಿರಾರು ವಾಹನ, ಜನರು ಓಡಾಡುವ ಸ್ಥಳ ಇದಾಗಿದೆ.


ಪೆಲತ್ತಳಿಕೆ ಕಾಸಿಂ ಮನೆಯ ತೋಟದಲ್ಲಿ ಹಾಗೂ ಸಾರ್ವಜನಿಕ ಟಾರು ರಸ್ತೆಯ ಪಕ್ಕದಲ್ಲಿರುವ 3 ವರ್ಷಗಳ ಹಿಂದೆ ಒಣಗಿದ ಅಪಾಯದಲ್ಲಿರುವ ಮರವೊಂದಿದೆ.

ದೇರ್ಜಾಲು ಅನಂದ ಪೂಜಾರಿ ಯವರ ತೋಟದಲ್ಲಿ ಬಾಳೆ ಗಿಡ ಮತ್ತು ಹಲಸಿನ ಮರದ ಕೊಂಬೆಗಳು ವಿದ್ಯುತ್ ಸ್ಪರ್ಶಿಸಿ ಸುಟ್ಟು ಕರಕಲಾಗಿದೆ.

ರಕ್ತೇಶ್ವರಿಪದವು ಕ್ರಾಸ್ ರಸ್ತೆ ಮೇಲ್ಬಾಗದಲ್ಲಿ ತಂತಿಯ ಮೇಲೆ ಮರದ ಕೊಂಬೆ ತಾಗುತ್ತಿವೆ. (ಕಳೆದ ತಿಂಗಳು ಬೈ ಹುಲ್ಲಿನ ವಾಹನಕ್ಕೆ ಬೆಂಕಿ ತಗುಲಿದ ಹತ್ತಿರದ ಸ್ಥಳ),

ಪೇಲತ್ತಳಿಕ್ಕೆ ಮನೆಯ ಮುಂಭಾಗದಲ್ಲಿರುವ ತಂತಿಗಳು ಮರಕ್ಕೆ ತಾಗುತ್ತಿವೆ ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರ

Related posts

ವೇಣೂರು: ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya
error: Content is protected !!