September 6, 2026
ಗ್ರಾಮಾಂತರ ಸುದ್ದಿ

ಕಳಿಯ ಗ್ರಾ. ಪಂ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ :ಸೂಕ್ತ ಕ್ರಮಕ್ಕೆ ನಾಗರಿಕರ ಆಗ್ರಹ

ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪ

—————————————————

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ವಿದ್ಯುತ್ ತಂತಿಗಳು ಅಪಾಯದ ಸ್ಥಿತಿಯಲ್ಲಿ ಇದ್ದು, ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

ಪರಪ್ಪು ರಸ್ತೆ ಬದಿಯ ಸಮೀಪದ ಸುಣ್ಣಲಡ್ಡ ಕಾಂಪ್ಲೆಕ್ಸ್ ಹತ್ತಿರದ ನೆಲಕ್ಕೆ ಹಾಕಿಕೊಂಡಿರುವ ಅಕೇಶಿಯ ಮರಕ್ಕೆ ತಂತಿ ತಾಗುವುದಕ್ಕೆ ಕೇವಲ (½)ಅರ್ಧ ಅಡಿ ಮಾತ್ರ ಇದೆ.

ಪರಪ್ಪು- ಕೊಯ್ಯೂರು ರಸ್ತೆಯ ಪದಗೋಳಿ ಸಮೀಪದ ಮಾರ್ಗ ಬದಿಯಲ್ಲಿ ರುವ ಅಪಾಯಕಾರಿ ಒಣಗಿದ ಮರವೊಂದಿದ್ದು, ಸಾವಿರಾರು ವಾಹನ, ಜನರು ಓಡಾಡುವ ಸ್ಥಳ ಇದಾಗಿದೆ.


ಪೆಲತ್ತಳಿಕೆ ಕಾಸಿಂ ಮನೆಯ ತೋಟದಲ್ಲಿ ಹಾಗೂ ಸಾರ್ವಜನಿಕ ಟಾರು ರಸ್ತೆಯ ಪಕ್ಕದಲ್ಲಿರುವ 3 ವರ್ಷಗಳ ಹಿಂದೆ ಒಣಗಿದ ಅಪಾಯದಲ್ಲಿರುವ ಮರವೊಂದಿದೆ.

ದೇರ್ಜಾಲು ಅನಂದ ಪೂಜಾರಿ ಯವರ ತೋಟದಲ್ಲಿ ಬಾಳೆ ಗಿಡ ಮತ್ತು ಹಲಸಿನ ಮರದ ಕೊಂಬೆಗಳು ವಿದ್ಯುತ್ ಸ್ಪರ್ಶಿಸಿ ಸುಟ್ಟು ಕರಕಲಾಗಿದೆ.

ರಕ್ತೇಶ್ವರಿಪದವು ಕ್ರಾಸ್ ರಸ್ತೆ ಮೇಲ್ಬಾಗದಲ್ಲಿ ತಂತಿಯ ಮೇಲೆ ಮರದ ಕೊಂಬೆ ತಾಗುತ್ತಿವೆ. (ಕಳೆದ ತಿಂಗಳು ಬೈ ಹುಲ್ಲಿನ ವಾಹನಕ್ಕೆ ಬೆಂಕಿ ತಗುಲಿದ ಹತ್ತಿರದ ಸ್ಥಳ),

ಪೇಲತ್ತಳಿಕ್ಕೆ ಮನೆಯ ಮುಂಭಾಗದಲ್ಲಿರುವ ತಂತಿಗಳು ಮರಕ್ಕೆ ತಾಗುತ್ತಿವೆ ಇದರ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರ

Related posts

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಡಾ. ಪ್ರಸನ್ನಕುಮಾರ ಐತಾಳರಿಗೆ “ಎ. ಶಾಮ ರಾವ್ ಸ್ಮಾರಕ ಉತ್ತಮ ಶಿಕ್ಷಕ” ಪ್ರಶಸ್ತಿ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಹರಿಯಾಣದಲ್ಲಿ ನಡೆಯುವ ಗೋಲ್ಡನ್ ಆರೋ ರ್‍ಯಾಲಿಗೆ ಬೆಳ್ತಂಗಡಿಯ ಸೇವಂತಿ, ದ್ವಿಶಾ ಆಯ್ಕೆ

Suddi Udaya

ಕೊಕ್ಕಡ ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.66 ಫಲಿತಾಂಶ

Suddi Udaya
error: Content is protected !!