ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya

ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ.

ಮನೆಯ ಮೇಲ್ಪಾವಣಿಯ ಒಂದು ಭಾಗಕ್ಕೂ ಹಾನಿಯಾಗಿದೆ. ಟಿವಿ, ಫ್ಯಾನು ಸಹಿತ ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ.

ಈ ವೇಳೆ ಹಟ್ಟಿಯಲ್ಲಿದ್ದ ದನ ಹಾಗೂ ಮನೆಯ ಆವರಣದಲ್ಲಿದ್ದ ನಾಯಿ ಸಿಡಿಲಿನ ಆಘಾತದಿಂದ ಮೃತಪಟ್ಟಿವೆ. ಮನೆಯವರು ಅಪಾಯದಿಂದ ಪಾರಾಗಿದ್ದಾರೆ.

Leave a Comment

error: Content is protected !!