23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

ಬೆಳ್ತಂಗಡಿ: ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾನ ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮತದಾನ ಕೇಂದ್ರಗಳಲ್ಲಿ ಆರಂಭಗೊಂಡಿದೆ.

ನೈರುತ್ಯ ಪದವಿಧರ ಕ್ಷೇತ್ರದಲ್ಲಿ 10 ಮಂದಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 1543 ಮತದಾರಿದ್ದು, ಬೆಳ್ತಂಗಡಿ ಆಡಳಿತ ಸೌಧದ ಎರಡು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 878 ಮತದಾರರಿದ್ದು, ಆಡಳಿತ ಸೌಧದ ಒಂದು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.

ನೈರುತ್ಯ ಪದವಿಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಹಾಗೂ ಕಾಂಗ್ರೆಸ್‌ನಿಂದ ಆಯಾನೂರು ಮಂಜುನಾಥ್ ಅಭ್ಯರ್ಥಿಗಳಾಗಿದ್ದು, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಾಕಣದಲ್ಲಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಭೋಜೇ ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಕೆ.ಕೆ ಮಂಜುನಾಥ್ ಅಭ್ಯರ್ಥಿಯಾಗಿದ್ದಾರೆ.

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತ್ತು ಪತ್ನಿ ಡಾ| ಸ್ವೀಕೃತ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಸೇರಿದಂತೆ ಪವಿಧರರು ಹಾಗೂ ಶಿಕ್ಷಕ ಕ್ಷೇತ್ರದ ಮತದಾರರು ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದರು.

Related posts

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪೆರ್ಮುಡ ಶ್ರೀ ಜಗದೀಶ್ವರ ಭಜನಾ ಮಂಡಳಿ ಕುಣಿತ ಭಜನಾ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಲೋಕಸಭಾ ಚುನಾವಣೆ ದಿನಾಂಕ ಪ್ರಕಟ: ಇಂದಿನಿಂದ ನೀತಿ ಸಂಹಿತೆ ಜಾರಿ: ದ.ಕ. ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya
error: Content is protected !!