25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

ಬೆಳ್ತಂಗಡಿ: ನೈರುತ್ಯ ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಮತದಾನ ಇಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕಚೇರಿಯ ಮೂರು ಮತದಾನ ಕೇಂದ್ರಗಳಲ್ಲಿ ಆರಂಭಗೊಂಡಿದೆ.

ನೈರುತ್ಯ ಪದವಿಧರ ಕ್ಷೇತ್ರದಲ್ಲಿ 10 ಮಂದಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 1543 ಮತದಾರಿದ್ದು, ಬೆಳ್ತಂಗಡಿ ಆಡಳಿತ ಸೌಧದ ಎರಡು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.
ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 878 ಮತದಾರರಿದ್ದು, ಆಡಳಿತ ಸೌಧದ ಒಂದು ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ.

ನೈರುತ್ಯ ಪದವಿಧರ ಕ್ಷೇತ್ರಕ್ಕೆ ಬಿಜೆಪಿಯಿಂದ ಶಿವಮೊಗ್ಗದ ಡಾ. ಧನಂಜಯ ಸರ್ಜಿ ಹಾಗೂ ಕಾಂಗ್ರೆಸ್‌ನಿಂದ ಆಯಾನೂರು ಮಂಜುನಾಥ್ ಅಭ್ಯರ್ಥಿಗಳಾಗಿದ್ದು, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರರಾಗಿ ಸ್ಪರ್ಧಾಕಣದಲ್ಲಿದ್ದಾರೆ. ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಭೋಜೇ ಗೌಡ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಕೆ.ಕೆ ಮಂಜುನಾಥ್ ಅಭ್ಯರ್ಥಿಯಾಗಿದ್ದಾರೆ.

ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ ಮತ್ತು ಪತ್ನಿ ಡಾ| ಸ್ವೀಕೃತ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಸೇರಿದಂತೆ ಪವಿಧರರು ಹಾಗೂ ಶಿಕ್ಷಕ ಕ್ಷೇತ್ರದ ಮತದಾರರು ಸರತಿಸಾಲಿನಲ್ಲಿ ನಿಂತು ಮತದಾನ ಮಾಡಿದರು.

Related posts

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ರೆಂಕೆದಗುತ್ತುನಲ್ಲಿ ಆವರಣ ಗೋಡೆ ಬಿದ್ದು ಹಾನಿ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!