25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಥ್ ರವರು ಜೂ.2ರಂದು ಉಜಿರೆ ಗ್ರಾಮದ ಮೇಲಿನ ಮಚಾರು ಎಂಬಲ್ಲಿರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಹಾಗೂ ಇನ್ನೊಬ್ಬ ವ್ಯಕ್ತಿ ಬಂದಿದ್ದಾರೆ. ಅವರಲ್ಲಿ ಕರುಣಾಕರ ಗೌಡ ಎಂಬವರು ಅಶ್ವಥ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಶ್ವತ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 64/2024, ಕಲಂ: 341,323,324,ಜೊತೆಗೆ 34 ಬಾ ದಂ ಸಂ ಮತ್ತು ಕಲಂ 3(1)(S) SC/ST ACT 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya
error: Content is protected !!