23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು ಮಾರುದ್ಧ ಬೆಳೆಸಿದವರು ಉಜಿರೆಯ ಅಕ್ಷರಿ ಶೆಟ್ಟಿಯವರು.

ಮಂಗಳೂರಿನ ಮಂಗಳ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್‌ನ ಪ್ರೊಫೆಸರ್ ಆಗಿರುವ ಶ್ರೀಮತಿ ಅಕ್ಷತಾ ಆಳ್ವ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡಬಿದ್ರಿಯ ಆಡಳಿತಾಧಿಕಾರಿ ಹರೀಶ್ ಶೆಟ್ಟಿ ದಂಪತಿ ಪುತ್ರಿ 5ನೇ ತರಗತಿಯಲ್ಲಿ ಕಲಿಯುತ್ತಿರುವ ಅಕ್ಷರಿ ಶೆಟ್ಟಿ ಯವರು ಅದ್ಯಾವ ಪ್ರೀತಿಯಲ್ಲಿ ನೀಳಕೇಶವನ್ನು ಬೆಳೆಸಿದ್ದರೋ ಅಷ್ಟೇ ಪ್ರೀತಿಯಲ್ಲಿ ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿದರು.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಯೋಚಿಸಿದ ಈ ಹುಡುಗಿಗೆ ಕಾಣಿಸಿದ್ದು ನಿತ್ಯನಿರಂತರ ನೋವು ನರಳಾಟಗಳ ಮಧ್ಯೆ ತಮ್ಮ ಮುಂದಿನ ಜೀವನದ ಬಗ್ಗೆ ಯೋಚಿಸಲೂ ಅಸಮರ್ಥರಾಗಿ ಖಿನ್ನತೆಯ ಲೋಕದಲ್ಲಿ ಹುದುಗಿಹೋದ ಕ್ಯಾನ್ಸರ್ ಪೀಡಿತರು. ಎಲ್ಲರ ಮೊಗದಲ್ಲಿ ಅಲ್ಲವಾದರೂ ಕೆಲವರ ಮೊಗದಲ್ಲಾದರೂ ಮತ್ತೊಮ್ಮೆ ಕಳೆದುಹೋದ ಅವರ ನಗುವನ್ನು ಕಾಣಬೇಕೆಂಬ ಹಂಬಲದಿಂದ ತನ್ನ ಅತೀ ಪ್ರೀತಿಯ ಕೂದಲನ್ನು ದಾನವಾಗಿ ನೀಡಿ ಸಮಾಜದ ಎಲ್ಲರಿಗೂ ಆದರ್ಶವಾಗಿದ್ದಾರೆ. ಕುಮಾರಿ ಅಕ್ಷರಿಯ ಈ ನಡೆ ಎಲ್ಲರಿಂದಲೂ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಅಕ್ಷರಿಯ ಈ ಕಾರ್ಯ ಸರ್ವರಿಗೂ ಮಾದರಿಯಾಗಲಿ ಎನ್ನುವ ಆಶಯ.

Related posts

ವೇಣೂರು: ಉಳ್ತೂರು ನೂರುಲ್ ಹುದಾ ದರ್ಸ್ ವಿದ್ಯಾರ್ಥಿ ಸಾಹಿತ್ಯ ವೇದಿಕೆಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya
error: Content is protected !!