23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು ಮಾರುದ್ಧ ಬೆಳೆಸಿದವರು ಉಜಿರೆಯ ಅಕ್ಷರಿ ಶೆಟ್ಟಿಯವರು.

ಮಂಗಳೂರಿನ ಮಂಗಳ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್‌ನ ಪ್ರೊಫೆಸರ್ ಆಗಿರುವ ಶ್ರೀಮತಿ ಅಕ್ಷತಾ ಆಳ್ವ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡಬಿದ್ರಿಯ ಆಡಳಿತಾಧಿಕಾರಿ ಹರೀಶ್ ಶೆಟ್ಟಿ ದಂಪತಿ ಪುತ್ರಿ 5ನೇ ತರಗತಿಯಲ್ಲಿ ಕಲಿಯುತ್ತಿರುವ ಅಕ್ಷರಿ ಶೆಟ್ಟಿ ಯವರು ಅದ್ಯಾವ ಪ್ರೀತಿಯಲ್ಲಿ ನೀಳಕೇಶವನ್ನು ಬೆಳೆಸಿದ್ದರೋ ಅಷ್ಟೇ ಪ್ರೀತಿಯಲ್ಲಿ ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿದರು.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಯೋಚಿಸಿದ ಈ ಹುಡುಗಿಗೆ ಕಾಣಿಸಿದ್ದು ನಿತ್ಯನಿರಂತರ ನೋವು ನರಳಾಟಗಳ ಮಧ್ಯೆ ತಮ್ಮ ಮುಂದಿನ ಜೀವನದ ಬಗ್ಗೆ ಯೋಚಿಸಲೂ ಅಸಮರ್ಥರಾಗಿ ಖಿನ್ನತೆಯ ಲೋಕದಲ್ಲಿ ಹುದುಗಿಹೋದ ಕ್ಯಾನ್ಸರ್ ಪೀಡಿತರು. ಎಲ್ಲರ ಮೊಗದಲ್ಲಿ ಅಲ್ಲವಾದರೂ ಕೆಲವರ ಮೊಗದಲ್ಲಾದರೂ ಮತ್ತೊಮ್ಮೆ ಕಳೆದುಹೋದ ಅವರ ನಗುವನ್ನು ಕಾಣಬೇಕೆಂಬ ಹಂಬಲದಿಂದ ತನ್ನ ಅತೀ ಪ್ರೀತಿಯ ಕೂದಲನ್ನು ದಾನವಾಗಿ ನೀಡಿ ಸಮಾಜದ ಎಲ್ಲರಿಗೂ ಆದರ್ಶವಾಗಿದ್ದಾರೆ. ಕುಮಾರಿ ಅಕ್ಷರಿಯ ಈ ನಡೆ ಎಲ್ಲರಿಂದಲೂ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಅಕ್ಷರಿಯ ಈ ಕಾರ್ಯ ಸರ್ವರಿಗೂ ಮಾದರಿಯಾಗಲಿ ಎನ್ನುವ ಆಶಯ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಗುರುಪೂರ್ಣಿಮಾ ಆಚರಣೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಕಿಲ್ಲೂರಿನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಹೋರಿ ಸಾವು

Suddi Udaya

ಡಿ.10: ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya
error: Content is protected !!