23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೋಹಿಣಿ ಕೆ., ಟ್ರಸ್ಟಿಗಳಾದ ಹರೀಶ್ ಕಾರಿಂಜ, ಗಣೇಶ್ ನಾವೂರು, ತನಿಯಪ್ಪ ನಲ್ಕೆ, ತಿಮ್ಮಪ್ಪ ಗೋಲ್ತರ, ಶ್ರೀಮತಿ ಪೂರ್ಣಿಮ ಧರ್ಣಪ್ಪ ಮೂಲ್ಯ, ನಾವೂರಿನ ವೈದ್ಯರಾದ ಡಾ| ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

ಕಳೆದ 8 ವರ್ಷಗಳಿಂದ ಪ್ರತಿ ಬುಧವಾರ ನಾವೂರು ದೇವಸ್ಥಾನದಲ್ಲಿ ಭಗವದ್ಗೀತಾ ಪಾಠ-ಪಠಣ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈಗಾಗಲೇ 12 ಹಾಗೂ 15 ಅಧ್ಯಾಯವನ್ನು ಕಂಠಪಾಠ ಮಾಡಿರುತ್ತಾರೆ. ಈ ವರ್ಷ 16 ಅಧ್ಯಾಯದ ಪಾಠ ಮುಂದುವರಿಯಲಿದ್ದು ಊರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಹೊಳೆಯಲ್ಲಿ ಮೀನುಗಳು ಸಾವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಬೆಳ್ತಂಗಡಿಯ ಸ್ವರ್ಣ ಶಿಲ್ಪಿ ಎಚ್. ಗೋಪಾಲ ಆಚಾರ್ಯ ರವರಿಗೆ ‘ಎಸ್.ಕೆ.ಜಿ.ಐ ಪಾಲ್ಕೆ ಪ್ರಶಸ್ತಿ”

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!