September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೋಹಿಣಿ ಕೆ., ಟ್ರಸ್ಟಿಗಳಾದ ಹರೀಶ್ ಕಾರಿಂಜ, ಗಣೇಶ್ ನಾವೂರು, ತನಿಯಪ್ಪ ನಲ್ಕೆ, ತಿಮ್ಮಪ್ಪ ಗೋಲ್ತರ, ಶ್ರೀಮತಿ ಪೂರ್ಣಿಮ ಧರ್ಣಪ್ಪ ಮೂಲ್ಯ, ನಾವೂರಿನ ವೈದ್ಯರಾದ ಡಾ| ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

ಕಳೆದ 8 ವರ್ಷಗಳಿಂದ ಪ್ರತಿ ಬುಧವಾರ ನಾವೂರು ದೇವಸ್ಥಾನದಲ್ಲಿ ಭಗವದ್ಗೀತಾ ಪಾಠ-ಪಠಣ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈಗಾಗಲೇ 12 ಹಾಗೂ 15 ಅಧ್ಯಾಯವನ್ನು ಕಂಠಪಾಠ ಮಾಡಿರುತ್ತಾರೆ. ಈ ವರ್ಷ 16 ಅಧ್ಯಾಯದ ಪಾಠ ಮುಂದುವರಿಯಲಿದ್ದು ಊರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ಕಣಿಯೂರು ವಿಸ್ತೃತ ಡೈರಿ ಉದ್ಘಾಟನೆ-ಹೈನುಗಾರಿಕಾ ಮಾಹಿತಿ

Suddi Udaya

ಧರ್ಮಸ್ಥಳ : ಪುದುವೆಟ್ಟು ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya
error: Content is protected !!