26.2 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

ನೆರಿಯ: ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇವರ ಸಹಯೋಗದೊಂದಿಗೆ ಪ್ರಗತಿಪರ ಕೃಷಿಕ ರಾಧಾಕೃಷ್ಣ ಹೆಬ್ಬಾರ್ ರವರ ಸಹಕಾರದಲ್ಲಿ ಜೂನ್ 1ರಂದು ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನ ಅಪ್ಪೆಲ ಬಯಲು, ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ ಜರುಗಿತು.

ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಎ. ನಾರಾಯಣ ಮೂರ್ತಿ (IಈS ಖಣಜ.) ಕಾರ್ಯಕ್ರಮ ಉದ್ಘಾಟಿಸಿ ಬಿದಿರು ಕೃಷಿ ಮಾಡುವ ವಿಧಾನ ಮತ್ತು ಬಿದಿರು ಉತ್ಪನ್ನಗಳಿಗೆ ಇರುವ ಜಾಗತಿಕ ಬೇಡಿಕೆ ಬಗ್ಗೆ ಸೇರಿದ ಕೃಷಿಕರಿಗೆ ಮಾಹಿತಿ ನೀಡಿದರು.

ಬ್ಯಾಂಬೊ ಸೊಸೈಟಿಯ ಅಧ್ಯಕ್ಷ ಪುನತಿ ಶ್ರೀಧರ್ (IಈS ಖಣಜ.) ಬಿದಿರು ಕೃಷಿಯ ಅವಶ್ಯಕತೆಗಳು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಮಾದರಿ ಬಿದಿರು ಕೃಷಿ ಪ್ರದೇಶವನ್ನು ಮಾಡುವ ಉದ್ದೇಶ ಬ್ಯಾಂಬೊ ಸೊಸೈಟಿಗಿದ್ದು, ಆಸಕ್ತ ಕೃಷಿಕರಿಗೆ ಉಚಿತ ಬಿದಿರು ಸಸಿಗಳ ಜೊತೆಗೆ ಪ್ರೋತ್ಸಾಹವನ್ನು ರಬ್ಬರು ಸೊಸೈಟಿ ಮೂಲಕ ನೀಡುವುದಾಗಿ ತಿಳಿಸಿದರು.

ಬಿದಿರು ಕೃಷಿಯಲ್ಲಿ ತೊಡಗಿಕೊಂಡಿರುವಂತಹ ನೆರಿಯದ ರಾಧಾಕೃಷ್ಣ ಹೆಬ್ಬಾರ್ ಇವರು ಕೃಷಿಯನ್ನು ಮಾಡುವ ಸಂದರ್ಭದಲ್ಲಿ ಇರುವ ಸವಾಲುಗಳು ಹಾಗೂ ಕೃಷಿಯ ವಿಧಾನಗಳನ್ನು ತಮ್ಮ ಬಿದಿರು ತೋಟದ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅಧೀಕ್ಷಕ ಶ್ರೀಧರ್ ಮಾತನಾಡಿ ಬಿದಿರು ಕೃಷಿಗೆ ಇಲಾಖೆಯಿಂದ ಸಿಗಬಹುದಾದ ಪ್ರೋತ್ಸಾಹದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.ರಬ್ಬರ್ ಸೊಸೈಟಿ ಅಧ್ಯಕ್ಷರಾದ ಶ್ರೀ ಶ್ರೀಧರ ಜಿ ಭಿಡೆ ಯವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ರಬ್ಬರ್ ಸೊಸೈಟಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಎಂ. ಅನಂತ ಭಟ್ ವಂದಿಸಿದರು.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ನಡ ಶತಮಾನೋತ್ಸವ ಸಮಿತಿಯಿಂದ ವಿ.ಪ. ಶಾಸಕ ಮಂಜುನಾಥ ಭಂಡಾರಿಯವರ ಭೇಟಿ

Suddi Udaya

ಜಿಲ್ಲಾ ಸಂಸ್ಕಾರ ಭಾರತೀ ವತಿಯಿಂದ ವೇಣೂರಿನ ಶ್ರೀ ವರ್ಧಮಾನ ಸ್ವಾಮಿ ಬಸದಿಯಲ್ಲಿ “ಸಂಸ್ಕಾರ ಸಿಂಧೂರ” ಚಿಂತನ ಮಂಥನ ಕಾರ್ಯಕ್ರಮ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!