July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

ಮಚ್ಚಿನ: ಗುರುವಾಯನಕೆರೆ ಯೋಜನ ಕಛೇರಿ ವ್ಯಾಪ್ತಿಯ ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಜೂ.5ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮಕ್ಕೆ ಹೊಂಡ ರಚನೆ, ಶಾಲಾ ಕೈತೋಟ ರಚನೆ, ಮಡಂತ್ಯಾರು ಹಾಗೂ ಮಚ್ಚಿನ, ಪಾಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರ ನೇತೃತ್ವದಲ್ಲಿ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ಸುಭಾಷ್, ಸೇವಾ ಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಡಂತ್ಯಾರು ಘಟಕದ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ಯೋಗೀಶ್ ಕೋಡ್ಲಕ್ಕೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಸತೀಶ್ ಆಚಾರ್ಯ ಮತ್ತು ಮಚ್ಚಿನ -ಪಾಲಡ್ಕ ಘಟಕದ ಪ್ರಭಾಕರ ಮುದಲಡ್ಕ, ಹೊನ್ನಪ್ಪ ಮೂಲ್ಯ, ಜಯ ಪೂಜಾರಿ, ಅವಿನಾಶ್ ಶ್ರಮದಾನದಲ್ಲಿ ಸಹಕರಿಸಿದರು.

Related posts

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!