April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2023-24 ನೇ ಸಾಲಿನ ಸೀವಿಂಗ್ ಟೆಕ್ನಾಲಜಿ ವಿದ್ಯಾರ್ಥಿನಿಯರಿಗೆ ‘ಮೆಷಿನ್ ಎಂಬ್ರಾಯ್ಡರಿ’ ಕುರಿತ ಮೂರು ದಿನಗಳ ವಿಶೇಷ ತರಬೇತಿ ಕಾರ್ಯಾಗಾರ ಜೂ.3ರಂದು ನಡೆಯಿತು.

ಸಂಪನ್ಮೂಲ ವ್ಯಕ್ತಿ ವೇಣೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ನಾಗೇಶ್ ಶೇಟ್ ಎಂಬ್ರಾಯ್ಡರಿ ಯಂತ್ರದ ಕಾರ್ಯವೈಖರಿ, ಸುಮಾರು 150 ಕ್ಕೂ ಹೆಚ್ಚು ವಿವಿಧ ಎಂಬ್ರಾಯ್ಡರಿ ವಿನ್ಯಾಸಗಳ ಬಗ್ಗೆ ತಿಳಿಸಿದರು. ಹ್ಯಾಂಡ್ ಎಂಬ್ರಾಯ್ಡರಿ ಮತ್ತು ಮೆಷಿನ್ ಎಂಬ್ರಾಯ್ಡರಿ ನಡುವಣ ವ್ಯತ್ಯಾಸ ತಿಳಿಸಿದರು.

ವಿದ್ಯಾರ್ಥಿನಿಯರು ಎಂಬ್ರಾಯ್ಡರಿ ಯಂತ್ರವನ್ನು ಬಳಸುವ ಅನುಭವ ಪಡೆದರು. ವಿದ್ಯಾರ್ಥಿನಿಯರಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.

Related posts

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

Suddi Udaya

ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಪೆರಾಡಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya
error: Content is protected !!