25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಇಲ್ಲಿಗೆ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ . ಚಂದ್ರಶೇಖರ ಸಾಲ್ಯಾನ್ ಇವರು ಅಧಿಕೃತವಾಗಿ ಭೇಟಿ ನೀಡಿ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಇತ್ತೀಚಿನ ದಿನಗಳಲ್ಲಿ ಭಜನೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಮಲೋಚನೆ ನಡೆಸಿ , ನಮಗೆ ಮಾತ್ರವಲ್ಲದೆ ಮಕ್ಕಳಿಗೂ ವಿವಿಧತೆಯ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಏಕತೆಯನ್ನು ಕಾಣುವಂತಾಗಲು ನಾವೆಲ್ಲರೂ ಪ್ರೇರಣೆಯಾಗೋಣ ಎಂದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಉಪಾಧ್ಯಕ್ಷರಾದ ಶೇಖರ ಗೌಡ ಕೋರಿಯಾರು ಗೌರವ ಅಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ ಕಾರ್ಯದರ್ಶಿ ಶ ಮನೋಜ್ ಕುಮಾರ್ ಕಜೆ ಕೋಶಾಧಿಕಾರಿ ಪಿ. ಬಾಲಕೃಷ್ಣ ಸಾಲಿಯಾನ್ ಲೆಕ್ಕಪರಿಶೋಧಕರಾದ ಹೇಮಂತಗೌಡ ಬೊಟ್ಟು ಹಾಗೂ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಲಿಂಗಪ್ಪಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.

Related posts

ಧರ್ಮಸ್ಥಳ: ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬಸ್ಥರೊಂದಿಗೆ ಮತದಾನ

Suddi Udaya

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಜಾನಕಿ ನಿಧನ

Suddi Udaya

ಶಿಬಾಜೆ ಕಾಂಗ್ರೆಸ್ ಬೂತ್ ಸಮಿತಿಯ ಅಧ್ಯಕ್ಷ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗಿ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

Suddi Udaya
error: Content is protected !!