July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಇಲ್ಲಿಗೆ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ . ಚಂದ್ರಶೇಖರ ಸಾಲ್ಯಾನ್ ಇವರು ಅಧಿಕೃತವಾಗಿ ಭೇಟಿ ನೀಡಿ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಇತ್ತೀಚಿನ ದಿನಗಳಲ್ಲಿ ಭಜನೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಮಲೋಚನೆ ನಡೆಸಿ , ನಮಗೆ ಮಾತ್ರವಲ್ಲದೆ ಮಕ್ಕಳಿಗೂ ವಿವಿಧತೆಯ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಏಕತೆಯನ್ನು ಕಾಣುವಂತಾಗಲು ನಾವೆಲ್ಲರೂ ಪ್ರೇರಣೆಯಾಗೋಣ ಎಂದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಉಪಾಧ್ಯಕ್ಷರಾದ ಶೇಖರ ಗೌಡ ಕೋರಿಯಾರು ಗೌರವ ಅಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ ಕಾರ್ಯದರ್ಶಿ ಶ ಮನೋಜ್ ಕುಮಾರ್ ಕಜೆ ಕೋಶಾಧಿಕಾರಿ ಪಿ. ಬಾಲಕೃಷ್ಣ ಸಾಲಿಯಾನ್ ಲೆಕ್ಕಪರಿಶೋಧಕರಾದ ಹೇಮಂತಗೌಡ ಬೊಟ್ಟು ಹಾಗೂ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಲಿಂಗಪ್ಪಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.

Related posts

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಇಂದಬೆಟ್ಟುವಿನಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ: ವಿವಿಧ ಸಮಿತಿಗಳ ರಚನೆ -ಸಂಚಾಲಕ ಹಾಗೂ ಉಪಸಂಚಾಲಕರ ಆಯ್ಕೆ

Suddi Udaya
error: Content is protected !!