25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು ಮಾರುದ್ಧ ಬೆಳೆಸಿದವರು ಉಜಿರೆಯ ಅಕ್ಷರಿ ಶೆಟ್ಟಿಯವರು.

ಮಂಗಳೂರಿನ ಮಂಗಳ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್‌ನ ಪ್ರೊಫೆಸರ್ ಆಗಿರುವ ಶ್ರೀಮತಿ ಅಕ್ಷತಾ ಆಳ್ವ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡಬಿದ್ರಿಯ ಆಡಳಿತಾಧಿಕಾರಿ ಹರೀಶ್ ಶೆಟ್ಟಿ ದಂಪತಿ ಪುತ್ರಿ 5ನೇ ತರಗತಿಯಲ್ಲಿ ಕಲಿಯುತ್ತಿರುವ ಅಕ್ಷರಿ ಶೆಟ್ಟಿ ಯವರು ಅದ್ಯಾವ ಪ್ರೀತಿಯಲ್ಲಿ ನೀಳಕೇಶವನ್ನು ಬೆಳೆಸಿದ್ದರೋ ಅಷ್ಟೇ ಪ್ರೀತಿಯಲ್ಲಿ ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿದರು.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಯೋಚಿಸಿದ ಈ ಹುಡುಗಿಗೆ ಕಾಣಿಸಿದ್ದು ನಿತ್ಯನಿರಂತರ ನೋವು ನರಳಾಟಗಳ ಮಧ್ಯೆ ತಮ್ಮ ಮುಂದಿನ ಜೀವನದ ಬಗ್ಗೆ ಯೋಚಿಸಲೂ ಅಸಮರ್ಥರಾಗಿ ಖಿನ್ನತೆಯ ಲೋಕದಲ್ಲಿ ಹುದುಗಿಹೋದ ಕ್ಯಾನ್ಸರ್ ಪೀಡಿತರು. ಎಲ್ಲರ ಮೊಗದಲ್ಲಿ ಅಲ್ಲವಾದರೂ ಕೆಲವರ ಮೊಗದಲ್ಲಾದರೂ ಮತ್ತೊಮ್ಮೆ ಕಳೆದುಹೋದ ಅವರ ನಗುವನ್ನು ಕಾಣಬೇಕೆಂಬ ಹಂಬಲದಿಂದ ತನ್ನ ಅತೀ ಪ್ರೀತಿಯ ಕೂದಲನ್ನು ದಾನವಾಗಿ ನೀಡಿ ಸಮಾಜದ ಎಲ್ಲರಿಗೂ ಆದರ್ಶವಾಗಿದ್ದಾರೆ. ಕುಮಾರಿ ಅಕ್ಷರಿಯ ಈ ನಡೆ ಎಲ್ಲರಿಂದಲೂ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಅಕ್ಷರಿಯ ಈ ಕಾರ್ಯ ಸರ್ವರಿಗೂ ಮಾದರಿಯಾಗಲಿ ಎನ್ನುವ ಆಶಯ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ರಂಜನ್ ಜಿ ಗೌಡ, ಹಾಗೂ ಕಾರ್ಯದರ್ಶಿಯಾಗಿ ಅಭಿನಂದನ್ ಹರೀಶ್ ಕುಮಾರ್ ನೇಮಕ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya
error: Content is protected !!