25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು ಮಾರುದ್ಧ ಬೆಳೆಸಿದವರು ಉಜಿರೆಯ ಅಕ್ಷರಿ ಶೆಟ್ಟಿಯವರು.

ಮಂಗಳೂರಿನ ಮಂಗಳ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಸೈನ್ಸ್‌ನ ಪ್ರೊಫೆಸರ್ ಆಗಿರುವ ಶ್ರೀಮತಿ ಅಕ್ಷತಾ ಆಳ್ವ ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮೂಡಬಿದ್ರಿಯ ಆಡಳಿತಾಧಿಕಾರಿ ಹರೀಶ್ ಶೆಟ್ಟಿ ದಂಪತಿ ಪುತ್ರಿ 5ನೇ ತರಗತಿಯಲ್ಲಿ ಕಲಿಯುತ್ತಿರುವ ಅಕ್ಷರಿ ಶೆಟ್ಟಿ ಯವರು ಅದ್ಯಾವ ಪ್ರೀತಿಯಲ್ಲಿ ನೀಳಕೇಶವನ್ನು ಬೆಳೆಸಿದ್ದರೋ ಅಷ್ಟೇ ಪ್ರೀತಿಯಲ್ಲಿ ಅ ಜಡೆಯನ್ನು ಕತ್ತರಿಸಿ ಕ್ಯಾನ್ಸರ್ ಪೀಡಿತರಿಗೆ ದಾನವಾಗಿ ನೀಡಿದರು.

ಈ ವಿಶೇಷ ದಾನ ಇರುವುದು ಸತ್ ಚಿಂತನೆಯ ಸಮಾಜಮುಖಿ ನಡೆ. ನಾವು ಏನೇ ಕಲಿತರೂ ಅದು ಈ ಸಮಾಜದಿಂದಾನೆ ಕಲಿಯುವುದು, ಹೀಗಿರುವಾಗ ಸಮಾಜಕ್ಕೆ ನಾವು ನಮ್ಮಿಂದ ಸಾಧ್ಯವಿರುವ ಏನಾದರೊಂದನ್ನು ಕೊಡುಗೆಯಾಗಿ ನೀಡಬೇಕು ಎನ್ನುವ ನಿಟ್ಟಿನಲ್ಲಿ ಯೋಚಿಸಿದ ಈ ಹುಡುಗಿಗೆ ಕಾಣಿಸಿದ್ದು ನಿತ್ಯನಿರಂತರ ನೋವು ನರಳಾಟಗಳ ಮಧ್ಯೆ ತಮ್ಮ ಮುಂದಿನ ಜೀವನದ ಬಗ್ಗೆ ಯೋಚಿಸಲೂ ಅಸಮರ್ಥರಾಗಿ ಖಿನ್ನತೆಯ ಲೋಕದಲ್ಲಿ ಹುದುಗಿಹೋದ ಕ್ಯಾನ್ಸರ್ ಪೀಡಿತರು. ಎಲ್ಲರ ಮೊಗದಲ್ಲಿ ಅಲ್ಲವಾದರೂ ಕೆಲವರ ಮೊಗದಲ್ಲಾದರೂ ಮತ್ತೊಮ್ಮೆ ಕಳೆದುಹೋದ ಅವರ ನಗುವನ್ನು ಕಾಣಬೇಕೆಂಬ ಹಂಬಲದಿಂದ ತನ್ನ ಅತೀ ಪ್ರೀತಿಯ ಕೂದಲನ್ನು ದಾನವಾಗಿ ನೀಡಿ ಸಮಾಜದ ಎಲ್ಲರಿಗೂ ಆದರ್ಶವಾಗಿದ್ದಾರೆ. ಕುಮಾರಿ ಅಕ್ಷರಿಯ ಈ ನಡೆ ಎಲ್ಲರಿಂದಲೂ ವ್ಯಾಪಕ ಪ್ರಶಂಸೆಗೆ ಒಳಗಾಗಿದೆ. ಅಕ್ಷರಿಯ ಈ ಕಾರ್ಯ ಸರ್ವರಿಗೂ ಮಾದರಿಯಾಗಲಿ ಎನ್ನುವ ಆಶಯ.

Related posts

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

Suddi Udaya
error: Content is protected !!